370ನೇ ವಿಧಿರದ್ದು:ಪಂಜಾಬ್ನಲ್ಲಿ ನಾಳೆ ಬೃಹತ್ ಪ್ರತಿಭಟನೆ
ಮೊಗಾ,ಸೆಪ್ಟೆಂಬರ್ 14 ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ಕೇಂದ್ರದ ಕ್ರಮ ವಿರೋಧಿಸಿ,ಕಾಶ್ಮೀರದಲ್ಲಿನ ಪ್ರಸಕ್ತ ಸ್ಥಿತಿಯವಿರುದ್ಧ ವಿದ್ಯಾರ್ಥಿಗಳು, ರೈತರು ಸೇರಿದಂತೆ ಹನ್ನೊಂದು ಸಂಘಟನೆಗಳ ಕಾರ್ಯಕರ್ತರು ಭಾನುವಾರ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ವಿವಿಧ ರೈತ, ವಿದ್ಯಾಥರ್ಿ ಮತ್ತು ಕೈಗಾರಿಕಾ ಒಕ್ಕೂಟಗಳ ಪ್ರತಿಭಟನಾಕಾರರು ಮೊದಲು ಮೊಹಾಲಿಯಲ್ಲಿ ಸಮಾವೇಶಗೊಂಡು ನಂತರ ರಾಜ್ಯ ರಾಜಧಾನಿ ಚಂಡೀಗಡದವರೆಗೆ ವರೆಗೆ ಮೆರವಣಿಗೆ ನಡೆಸಲಿದ್ದಾರೆ ಎಂದು ಭಾರತೀಯ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಕೊಕ್ರಿ ಶನಿವಾರ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ಅವರು ಇದಕ್ಕೆ ಅನುಮತಿ ನೀಡುವಂತೆ ಜಿಲ್ಲಾಡಳಿತಕ್ಕೆ ನೋಟಿಸ್ ಸಹ ನೀಡಲಾಗಿದೆ ಎಂದರು.
370 ನೇ ವಿಧಿ ರದ್ದುಪಡಿಸಿದ ಸರಕಾರದ ಕ್ರಮ ಕಣಿವೆಯಲ್ಲಿನ ಸಮಸ್ಯೆ ಪರಿಹರಿಸಲು ಯಾವುದೇ ಸಹಾಯ ಮಾಡಲಿಲ್ಲ ಬದಲಾಗಿ ಸಾಮಾನ್ಯ ಜನಜೀವನ ಮತ್ತಷ್ಟು ದುರ್ಬಲಗೊಂಡಿದೆ ಎಂದು ಅವರು ದೂರಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 