ಕಲಾವಿದ ಮಂಜುನಾಥಗೌಡರಿಗೆ ‘ಕಲ್ಯಾಣ ಕಲಾಸಿರಿ’ ಗೌರವ
Artist Manjunatha Gowda honored with 'Kalyana Kalasiri'
ಲೋಕದರ್ಶನ ವರದಿ
ಕಲಾವಿದ ಮಂಜುನಾಥಗೌಡರಿಗೆ ‘ಕಲ್ಯಾಣ ಕಲಾಸಿರಿ’ ಗೌರವ
ದಾರವಾಡ 03: ದಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ತ್ರಿ ವಿಧ ದಾಸೋಹಿ ಪೂಜ್ಯ ಲಿಂ. ಬಸವಣ್ಣಜ್ಜನವರ ಪುಣ್ಯಸ್ಮರಣೋತ್ಸವ ಹಾಗೂ ಕಲ್ಯಾಣಪುರ ವೈಭವ ಸಮಾರಂಭದ ಅಂಗವಾಗಿ ಹುಬ್ಬಳ್ಳಿಯ ಖ್ಯಾತ ಕಲಾವಿದ ಮಂಜುನಾಥಗೌಡ ಪಾಟೀಲರಿಗೆ ‘ಕಲ್ಯಾಣ ಕಲಾಸಿರಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕುಂದಗೋಳದ ಕಲ್ಯಾಣಪುರ ಮಠದ ಬಸವಣ್ಣಜ್ಜ ಶ್ರೀಗಳು ಕಲಾವಿದ ಮಂಜುನಾಥಗೌಡರ ದೀರ್ಘಕಾಲದ ಕಲಾಸೇವೆಯನ್ನು ಮೆಚ್ಚಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆಗಳನ್ನು ಮಾಡಲಿ ಎಂದು ಹಾರೈಸಿ ಪ್ರಶಸ್ತಿ ನೀಡಿ ಗೌರವಿಸಿದರು.
ಸಮಾರಂಭದಲ್ಲಿ ಡಾ. ಗುರುಸಿದ್ಧ ರಾಜ ಯೋಗೇಂದ್ರ ಮಹಾಸ್ವಾಮಿಗಳು (ಮೂರುಸಾವಿರ ಮಠ, ಹುಬ್ಬಳ್ಳಿ), ನವಲಿಂಗ ಮಹಾಸ್ವಾಮಿಗಳು, ಪ್ರಭುದೇವ ಜ್ಞಾನ ಕೇಂದ್ರದ ಸಂತೆ ಕಡೂರು ಶಿವಮೊಗ್ಗ, ಸರೂ್ಭಷಣ ಸ್ವಾಮಿಗಳು, ಗದಿಗೆಯ ಸ್ವಾಮಿಗಳು, ರಾಚೋಟೇಶ್ವರ ಸ್ವಾಮಿಗಳು, ಪ್ರವಚನಕಾರ ಗವಿಸಿದ್ದೇಶ್ವರ ಶಾಸ್ತ್ರಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಸಾಂಸ್ಕೃತಿಕ ವಾತಾವರಣದಲ್ಲಿ ನಡೆದ ಕಾರ್ಯಕ್ರಮವು ಭಕ್ತಿಭಾವ ಹಾಗೂ ಕಲಾರಸಿಕರ ಮೆಚ್ಚುಗೆಗೆ ಪಾತ್ರವಾಯಿತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 