ಅಶೋಕ ಬಿರಾದಾರಗೆ ಸ್ಪೂರ್ತಿದಾಯಕ ವ್ಯಕ್ತಿ ಪ್ರಶಸ್ತಿ

ಅಶೋಕ ಬಿರಾದಾರಗೆ ಸ್ಪೂರ್ತಿದಾಯಕ ವ್ಯಕ್ತಿ ಪ್ರಶಸ್ತಿ  Ashoka Biradar gets Inspirational Person Award

ದೇವರಹಿಪ್ಪರಗಿ 1: ತಾಲೂಕಿನ ಕೋರವಾರ ಗ್ರಾಮದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಸಾಗರ ಬಣ)ಡಾ.ಬಿ.ಆರ್‌. ಅಂಬೇಡ್ಕರ ಅವರ 135ನೇ ಜಯಂತಿ ಪ್ರಯುಕ್ತ ಕೊಡ ಮಾಡುವ ರಾಜ್ಯಮಟ್ಟದ ಸ್ಪೂರ್ತಿದಾಯಕ ವ್ಯಕ್ತಿ ಪ್ರಶಸ್ತಿ-2026ರ ತಾಲೂಕಿನ ಭೈರವಾಡಗಿ ಗ್ರಾಮದ ಅಶೋಕ ಬಸಗೊಂಡಪ್ಪ ಬಿರಾದಾರ ಅವರ ಸಮಾಜ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.ಏ-19 ರಂದು ಸಂಜೆ 5 ಗಂಟೆಗೆ ಗುರುವಾರ ಗ್ರಾಮದಲ್ಲಿ ಜರಗುವ ಡಾ.ಬಿ.ಆರ್‌. ಅಂಬೇಡ್ಕರ್ ಜಯಂತಿಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.