ಶುಲ್ಕ ಹೆಚ್ಚಳ, ಕಾರಣ ಕೇಳಿ ಖಾಸಗಿ ಶಾಲೆಗಳಿಗೆ ನೋಟಿಸ್ ಜಾರಿ
ಬೆಂಗಳೂರು, ಮೇ 21,ಖಾಸಗಿ ಶಾಲಾ ಆಡಳಿತ ಮಂಡಳಿಗಳು ಶುಲ್ಕ ಹೆಚ್ಚಳ ಮಾಡಬಾರದು ಎಂಬ ಆದೇಶವನ್ನು ಧಿಕ್ಕರಿಸಿರುವುದು ಆಶಿಸ್ತಿನ ಪರಮಾವಧಿಯಾಗಿದೆ ಎಂದು ಸರ್ಕಾರ ಎಚ್ಚರಿಕೆ ನೋಟಿಸ್ ಜಾರಿ ಮಾಡಿದೆ. ಕರೋನ ಮತ್ತು ಲಾಕ್ಡೌನ್ ಕಾರಣ ರಾಜ್ಯದ ಜನತೆ ಬಹಳ ಸಂಕಷ್ಟದಲ್ಲಿ ಇರುವ ಸಮಯದಲ್ಲಿ ಶುಲ್ಕ ಹೆಚ್ಚಳ ಮಾಡಿ ಜನರ ಶೋಷಣೆಗೆ ಯಾವ ಖಾಸಗಿ ಶಾಲೆ ಮುಂದಾಗಬಾರದು ಸರ್ಕಾರ ಬಹಳ ಹಿಂದೆಯೇ ಸುತ್ತೊಲೆ ಹೊರಡಿಸಿದ್ದರೂ ಅದನ್ನು ಖಾಸಗಿ ಶಾಲೆಗಳು ಮಾನ್ಯ ಮಾಡದೆ ಪೋಷಕರ ಸುಲಿಗೆ ಮಾಡ ಹೊರಟಿರುವುದನ್ನು ಸಹಿಸಲಾಗದು ಎಚ್ಚರಿಕೆ ನೀಡಲಾಗಿದೆ. ಈ ಪತ್ರ ತಲುಪಿದ ಮೂರು ದಿನಗಳ ಒಳಗೆ ಲಿಖಿತ ಹೇಳಿಕೆ ಮೂಲಕ ಸೂಕ್ತ ಸಮಾಜಾಯಿಸಿ ಕೊಡಬೇಕು ತಪ್ಪಿದಲ್ಲಿ ಶಾಲೆಗಳ ವಿರುದ್ದ ಶಿಸ್ತು ಕ್ರಮ ಜರುಗಿಸುವುದು ಅನಿವಾರ್ಯವಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರಣ ಕೇಳಿ ಖಾಸಗಿ ಶಾಲೆಗಳಿಗೆ ನೋಟಿಸ್ ಜಾರಿಮಾಡಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 