ಸುಗಮ ಸಂಚಾರಕ್ಕೆ ಗ್ರಾಮೀಣ ರಸ್ತೆಗಳ ಡಾಂಬರೀಕರಣ
Asphalting of rural roads for smooth traffic
ರಾಯಬಾಗ, 26 ; ಗ್ರಾಮೀಣ ಭಾಗದ ಜನರಿಗೆ, ಶಾಲಾ ವಿದ್ಯಾರ್ಥಿಗಳಿಗೆ ಸುಗಮವಾಗಿ ಸಂಚರಿಸಲು ಅನುಕೂಲವಾಗಲು ಗ್ರಾಮೀಣ ಪ್ರದೇಶದ ಎಲ್ಲ ರಸ್ತೆಗಳನ್ನು ಡಾಂಬರೀಕರಣ ಮಾಡಲಾಗುತ್ತಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಮಂಗಳವಾರ ಜಿ.ಪಂ. ಇಲಾಖೆಯಿಂದ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಮಂಜೂರಾದ 30 ಲಕ್ಷ ರೂ. ವೆಚ್ಚದಲ್ಲಿ ತಾಲೂಕಿನ ಬೂದಿಹಾಳ ಕ್ರಾಸ್-ದೇವನಕಟ್ಟಿ ರಸ್ತೆಯಿಂದ ಸರ್ಕಾರಿ ಪ್ರೌಢ ಶಾಲೆ ವರೆಗೆ ರಸ್ತೆ ಡಾಂಬರೀಕರಣ ಮತ್ತು 50 ಲಕ್ಷ ರೂ.ವೆಚ್ಚದಲ್ಲಿ ಮಾಡಲಗಿ ಗ್ರಾಮದಿಂದ ಮೀರಾಪೂರಟ್ಟಿ ವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮಳೆಯಿಂದ ಹಾಳಾದ ರಸ್ತೆಗಳನ್ನು ಸುಧಾರಿಸಲು ಸರ್ಕಾರದಿಂದ ಅನುದಾನ ಮಂಜೂರು ಮಾಡಿಸಲಾಗಿದೆ. ಗುತ್ತಿಗೆದಾರರು ಗುಣಮಟ್ಟದಲ್ಲಿ ರಸ್ತೆ ಕಾಮಗಾರಿ ಮಾಡಬೇಕೆಂದು ಸೂಚಿಸಿದರು.
ಜಿ.ಪಂ.ಎಇಇ ಎಸ್.ಎಸ್. ಹೊಸಮನಿ, ಜೆಇ ರಾಕೇಶ ಕಟ್ಟೀಮನಿ, ಅಜೀತ ಮಾಂಗ, ವಿಜಯ ಆಕಳೆ, ಮಾರುತಿ ಉಪ್ಪಾರಟ್ಟಿ, ಅಜೀತ ಚೌಗಲಾ, ಮಹಾದೇವ ಬಿಳಿಕುರಿ, ಸುರೇಶ ಅಜ್ಜನವರ, ಸದಾ ಮಾಂಗ, ಮಲ್ಲಪ್ಪ ಗೌನೋಳಿ, ರವೀಂದ್ರ ದಾವನೆ, ಸುಧಾಕರ ಪಾಟೀಲ, ಸಂತೋಷ ಲಠ್ಠೆ, ಪ್ರಕಾಶ ಆಕಳೆ, ಪವಾಡಿ ಒಡೆಯರ, ನರಸಪ್ಪ ಲಠ್ಠೆ, ಮಲಕಾರಿ ನೂಲಿ, ಸಂತೋಷ ಕಾಂಬಳೆ, ವಿರೂಪಾಕ್ಷ ಪಾಟೀಲ ಸೇರಿ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 