ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೆ ಹಲ್ಲೆ: 1 ವರ್ಷ ಸಾದಾ ಕಾರಾಗೃಹ ಶಿಕ್ಷೆ
Assault on forest department staff: 1 year simple imprisonment
ಕೆಳ ನ್ಯಾಯಾಲಯದ ತೀರ್ಪು : ಭಾಗಶಃ ಬದಲಾವಣೆ ಜೊತೆಗೆ ತೀರ್ಪು ಪುರಸ್ಕರಿಸಿದ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ
ಕಾರವಾರ 17: ಮುಂಡಗೋಡ ಚೌಡಳ್ಳಿಯಲ್ಲಿ ಅರಣ್ಯ ಇಲಾಖೆಯ ವಸತಿ ಗೃಹಕ್ಕೆ ನುಗ್ಗಿ ಸಿಬ್ಬಂದಿಗೆ ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮೊದಲ ಮತ್ತು ಎರಡನೇ ಅಪರಾಧಿಗಳಿಗೆಕೆಳ ನ್ಯಾಯಾಲಯ ನೀಡಿದ ತೀರ್ುನ್ನು ಭಾಗಶಃ ಬದಲಾವಣೆ ಜೊತೆಗೆ ಶಿರಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.ಅಪರಾಧಿ ಗೋವಿಂದ ರಾಠೋಡ್ ಮಾಡಿದ ತೀರ್ು ಪುನರ್ ಪರೀಶೀಲನಾ ಅರ್ಜಿಯನ್ನು ಹೆಚ್ಚವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಕಿರಣ್ ಕಿಣಿ ತಿರಸ್ಕರಿಸಿದ್ದಾರೆ. ಮುಂಡಗೋಡ ಜೆಎಂಎಫ್ ಸಿ ನೀಡಿದ ತೀರ್ುನ ದಂಡದ ಮೊತ್ತವನ್ನು ರೂ. 4500 ರಿಂದ 2500 ರೂ.ಗೆ ಇಳಿಸಿದ್ದಾರೆ.ಮೂರನೇ ಆರೋಪಿ ಘಟನೆ ನಡೆದಾಗ ಅಪ್ರಾಪ್ತ ನಿದ್ದ ಕಾರಣಕ್ಕೆ ಬಾಲ ನ್ಯಾಯಾಲಯಕ್ಕೆ ಮುಂದಿನ ವಿಚಾರಣೆ ಗೆ ಶಿಫಾರಸ್ಸು ಮಾಡಲಾಗಿದೆ.2016 ರಲ್ಲಿ ಮುಂಡಗೋಡ ಠಾಣೆಯಲ್ಲಿ 241/2016 ದಾಖಲಾಗಿತ್ತು. ಆರೋಪಿ ಗೋವಿಂದ ಹಾಗೂ ಆತನ ಪತ್ನಿ ಶಾರದಾ ಸೇರಿಅರಣ್ಯ ಸಿಬ್ಬಂದಿ ಅರುಣ್ ಕುಮಾರ್ ಸೀತಾರಾಂ ಕಾಶಿ ಹಾಗೂ ಆತನ ಪತ್ನಿ ಮೇಲೆ ಹಲ್ಲೆ ಮಾಡಿದ್ದರು . ಕರ್ತವ್ಯಕ್ಕೆ ಅಡ್ಡಪಡಿಸಿ, ಹಲ್ಲೆಮಾಡಿ ಗಾಯಗೊಳಿಸಿದ್ದಲ್ಲದೆ ಜೀವ ಬೆದರಿಕೆ ಹಾಕಿದ್ದರು. ಇವರಿಗೆ ಮುಂಡಗೋಡ ಜೆಎಂಎಫ್ ಸಿಯಲ್ಲಿ 1 ವರ್ಷ ಸದಾ ಸಜೆ, ದಂಡ 4500 ರೂ ಹಾಗೂ ದೂರುದಾರರಿಗೆ ತಲಾ ಹತ್ತು ಸಾವಿರ ಪರಿಹಾರ ನೀಡುವಂತೆ ತೀರ್ು ನೀಡಿ ಆದೇಶಿಸಿತ್ತು. ಇದರ ವಿರುದ್ಧ ಅಪಾದಿತರು ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಕೆಳ ನ್ಯಾಯಾಲಯ ದ ತೀರ್ುನ್ನು ಭಾಗಶಃ ಎತ್ತಿ ಹಿಡಿದಿದೆ. ಸರ್ಕಾರದ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೇಶ್ ಎಂ.ಮಳಗೀಕರ್ ವಾದಿಸಿದ್ದರು....
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 