ಕೇರಳಕ್ಕೆ ನೆರವು ಪ್ರಕಟಿಸಿಲ್ಲ: ಯುಎಇ
ಅಬುಧಾಬಿ 24: ಜಡಿಮಳೆ, ಪ್ರವಾಹ, ಭೂಕುಸಿತವೇ ಮೊದಲಾದ ಭೀಕರ ನೈಸಗರ್ಿಕ ಪ್ರಕೋಪಕ್ಕೆ ನಲುಗಿಹೋಗಿರುವ ಕೇರಳಕ್ಕೆ "ಯಾವುದೇ ನಿದರ್ಿಷ್ಟ ಮೊತ್ತದ ಹಣಕಾಸು ನೆರವು ನೀಡುವ ಅಧಿಕೃತ ಘೋಷಣೆಯನ್ನು ತಾನು ಮಾಡೇ ಇಲ್ಲ ಎಂದು ಯುಎಇ ಸರಕಾರ ಸ್ಪಷ್ಟಪಡಿಸಿದೆ.
ಯುಎಇ ಆಥರ್ಿಕ ನೆರವು ಸ್ವೀಕರಿಸುವ ವಿಷಯದಲ್ಲಿ ಕೇಂದ್ರ ಮತ್ತು ಕೇರಳ ಸರಕಾರ ನಡುವಿನ ಹಗ್ಗಜಗ್ಗಾಟಕ್ಕೆ ತಾನು ಸಿಲುಕಿಕೊಂಡಿರುವುದನ್ನು ಗಮನಿಸಿರುವ ಯುಎಇ ಸರಕಾರ ಈ ಅಧಿಕೃತ ಹೇಳಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
"ಕೇರಳಕ್ಕೆ ಯಾವುದೇ ನಿದರ್ಿಷ್ಟ ಮೊತ್ತದ ಹಣಕಾಸು ನೆರವು ನೀಡುವ ಬಗ್ಗೆ ಯುಎಇ ಈ ತನಕ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎಂದು ಯುಎಇ ರಾಯಭಾರಿ ಅಹ್ಮದ್ ಅಲ್ಬನ್ನಾ ಹೇಳಿರುವುದನ್ನು ಉಲ್ಲೇಖೀಸಿ "ದ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ನಿನ್ನೆ ಗುರುವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು "ಯುಎಇ ಸರಕಾರ ಕೇರಳಕ್ಕೆ 700 ಕೋಟಿ ರೂ. ಹಣಕಾಸು ನೆರವು ನೀಡುವುದಾಗಿ ಹೇಳಿದೆ' ಎಂದು ತಿಳಿಸಿದ್ದರು.
ಮಾತ್ರವಲ್ಲದೆ ಅಬುಧಾಭಿಯ ಕ್ರೌನ್ ಪ್ರಿನ್ಸ್ ಶೇಖ್ ಮೊಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫೋನ್ ಕರೆ ಮಾಡಿ ಯುಎಇ ನೆರವು ಕೊಡುಗೆಯನ್ನು ತಿಳಿಸಿದ್ದಾರೆ ಎಂದೂ ಪಿಣರಾಯಿ ಹೇಳಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 