ಕೇರಳಕ್ಕೆ ನೆರವು ಪ್ರಕಟಿಸಿಲ್ಲ: ಯುಎಇ
ಅಬುಧಾಬಿ 24: ಜಡಿಮಳೆ, ಪ್ರವಾಹ, ಭೂಕುಸಿತವೇ ಮೊದಲಾದ ಭೀಕರ ನೈಸಗರ್ಿಕ ಪ್ರಕೋಪಕ್ಕೆ ನಲುಗಿಹೋಗಿರುವ ಕೇರಳಕ್ಕೆ "ಯಾವುದೇ ನಿದರ್ಿಷ್ಟ ಮೊತ್ತದ ಹಣಕಾಸು ನೆರವು ನೀಡುವ ಅಧಿಕೃತ ಘೋಷಣೆಯನ್ನು ತಾನು ಮಾಡೇ ಇಲ್ಲ ಎಂದು ಯುಎಇ ಸರಕಾರ ಸ್ಪಷ್ಟಪಡಿಸಿದೆ.
ಯುಎಇ ಆಥರ್ಿಕ ನೆರವು ಸ್ವೀಕರಿಸುವ ವಿಷಯದಲ್ಲಿ ಕೇಂದ್ರ ಮತ್ತು ಕೇರಳ ಸರಕಾರ ನಡುವಿನ ಹಗ್ಗಜಗ್ಗಾಟಕ್ಕೆ ತಾನು ಸಿಲುಕಿಕೊಂಡಿರುವುದನ್ನು ಗಮನಿಸಿರುವ ಯುಎಇ ಸರಕಾರ ಈ ಅಧಿಕೃತ ಹೇಳಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
"ಕೇರಳಕ್ಕೆ ಯಾವುದೇ ನಿದರ್ಿಷ್ಟ ಮೊತ್ತದ ಹಣಕಾಸು ನೆರವು ನೀಡುವ ಬಗ್ಗೆ ಯುಎಇ ಈ ತನಕ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎಂದು ಯುಎಇ ರಾಯಭಾರಿ ಅಹ್ಮದ್ ಅಲ್ಬನ್ನಾ ಹೇಳಿರುವುದನ್ನು ಉಲ್ಲೇಖೀಸಿ "ದ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ನಿನ್ನೆ ಗುರುವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು "ಯುಎಇ ಸರಕಾರ ಕೇರಳಕ್ಕೆ 700 ಕೋಟಿ ರೂ. ಹಣಕಾಸು ನೆರವು ನೀಡುವುದಾಗಿ ಹೇಳಿದೆ' ಎಂದು ತಿಳಿಸಿದ್ದರು.
ಮಾತ್ರವಲ್ಲದೆ ಅಬುಧಾಭಿಯ ಕ್ರೌನ್ ಪ್ರಿನ್ಸ್ ಶೇಖ್ ಮೊಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫೋನ್ ಕರೆ ಮಾಡಿ ಯುಎಇ ನೆರವು ಕೊಡುಗೆಯನ್ನು ತಿಳಿಸಿದ್ದಾರೆ ಎಂದೂ ಪಿಣರಾಯಿ ಹೇಳಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 