ಅಥಣಿ: ಶ್ರವಣ ದೋಷ ಕುರಿತು ಬೀದಿ ನಾಟಕ
ಲೋಕದರ್ಶನ ವರದಿ
ಚಿಂಚಲಿ 03: ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆಯಿಂದ ಶ್ರವಣ ದೋಷ ನಿವಾರಣೆ ಕುರಿತು ಹಮ್ಮಿಕೊಂಡು ಜನರಿಗೆ ತಿಳುವಳಿಕೆ ಮೂಡಿಸಲು ಬೀದಿ ನಾಟಕ ಕಲಾವಿದರ ಮೊರೆ ಹೋಗಿ ಶ್ರವಣ ದೋಷ ನಿವಾರಣೆ ಕುರಿತು ಅಥಣಿ ತಾಲೂಕಿನ ಶಂಕರಹಟ್ಟಿ, ನದಿಇಂಗಳಗಾಂವ, ಹಲ್ಯಾಳ ಆಯ್ದ ಗ್ರಾಮಗಳಿಗೆ ಬೀದಿ ನಾಟಕ ಕಾರ್ಯಕ್ರಮ ಆಯೋಜಿಸಿ ಶ್ರವಣ ದೋಷ ಕುರಿತು ಜನರಿಗೆ ಜಾಗೃತಿ ಮೂಡಿಸಲಾಯಿತು.
ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ಡಾ. ಅಂಬೇಡ್ಕರ ಜಾನಪದ ಕಲಾ ಪೋಷಕ ಸಂಘ ಚಿಂಚಲಿ ತಂಡದ ಕಲಾವಿದರಿಂದ ಆರೋಗ್ಯ ಇಲಾಖೆ ಐದು ತಾಲೂಕಿನಲ್ಲಿ ಆಯ್ದ ಗ್ರಾಮಗಳಿಗೆ ಆಯ್ಕೆ ಮಾಡಿದ ಕಲಾ ತಂಡಕ್ಕೆ ಕಾರ್ಯಕ್ರಮ ನೀಡಿ ಬೀದಿ ನಾಟಕ ಯಶಸ್ವಿಗೊಳಿಸಿದರು. ಆರೋಗ್ಯ ಇಲಾಖೆ ಆಯ್ಕೆ ಮಾಡಿ ಸೂಚಿದ ಗ್ರಾಮಗಳಿಗೆ ತೆರಳಿ ಕಾರ್ಯಕ್ರಮ ನೀಡಿದರು.
ಬೀದಿ ನಾಟಕ ತಂಡದ ಕಲಾವಿದರಾದ ರಾಮಚಂದ್ರ ಕಾಂಬಳೆ, ಪರಶುರಾಮ ಸಂಗಣ್ಣವರ, ಪ್ರಶಾಂತ ಕಾಂಬಳೆ, ಸಂತೋಷ ಕಾಂಬಳೆ, ಜಿನ್ನಪ್ಪ ಕಾಂಬಳೆ, ಶ್ಯಾಮಸುಂದರ ಬ್ಯಾಕುಡೆ, ಅಕ್ಕಮಹಾದೇವಿ ಜೋಕಾನಟ್ಟಿ, ಸರಸ್ವತಿ ಜೋಕಾನಟ್ಟಿ, ಚನ್ನಮಲ್ಲ ಕಾಂಬಳೆ ಅನೇಕ ಬೀದಿ ನಾಟಕ ಕಲಾವಿದರು ನಾಟಕದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗುಳೇದಾ, ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಮತ್ತು ಆಶಾ ಕಾರ್ಯಕತರ್ೆಯರು, ಅಂಗವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮದ ಮುಖಂಡರು, ಸಾರ್ವಜನಿಕರು, ವಿದ್ಯಾರ್ಥಿ, ವಿದ್ಯಾಥರ್ಿನಿಯರು ಬೀದಿ ನಾಟಕವನ್ನು ವೀಕ್ಷಿಸಿ ಹಮ್ಮಿಕೊಂಡ ಬೀದಿ ನಾಟಕ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 