ವಿಶ್ವಶಾಂತಿಗಾಗಿ ಅತಿ ರುದ್ರ ಕಾರ್ಯಕ್ರಮ
Ati Rudra program for world peace
ಲೋಕದರ್ಶನ ವರದಿ
ಬೆಳಗಾವಿ 04: ನಗರದ ಗುರುಪ್ರಸಾದ ಕಾಲೋನಿಯ ದತ್ತ ಮಂದಿರದಲ್ಲಿ ಇತ್ತೀಚೆಗೆ ಆರು ದಿನಗಳ ಕಾಲ ಅತಿ ರುದ್ರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಎರಡು ದಶಕಗಳ ನಂತರ ನಡೆದ ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ಎಪ್ಪತ್ತಕ್ಕೂ ಹೆಚ್ಚು ರುದ್ರ ಪಾಠಕರು ಪಾಲ್ಗೊಂಡಿದ್ದರು. ಪ್ರತಿದಿ ಐದು ಗಂಟೆಗಳ ಕಾಲ ರುದ್ರ ಪಠಣವನ್ನು ಮಾಡಿದರು.
ಚಂದ್ರಶೇಖರ ಜೋಶಿ ಹಾಗೂ ಬೋಂದ್ರೆ ಗುರುಗಳು ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹೋಮ ಹವನ ರುದ್ರ ಸ್ವಾಹಾಕಾರ ಕಾರ್ಯಕ್ರಮಗಳು ನೆರವೇರಿದವು . ಸಾಗರ ಕೆರೂರ, ದರ್ಶನ ಕುಲಕರ್ಣಿ, ವಿನಾಯಕ ಒಡೆಯರ. ಸಂತೋಷಾಚಾರ್ಯ ಜೋಶಿ , ವಿನಾಯಕ ಮುತಾಲಿಕ ದೇಸಾಯಿ , ಯೋಗೇಶ್, ಗಣೇಶ್ ಫಡಕೆ, ಸಂಜೀವ ಕುಲಕರ್ಣಿ, ಚಿದಂಬರ ಮುನವಳ್ಳಿ , ರಮೇಶ ದೀಕ್ಷಿತ್, ಶಾರ್ದೂಲ ಗುರೂಜಿ , ಭಾವು ಜೋಶಿ , ಅರ್ಚಕರಾದ ಮಹೇಶ್ ಹಿರೇಹಳ್ಳಿ ,. ಉದ್ಯೋಗಪತಿ ರವಿ ಕಾಟವಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿಯ ವಿಪ್ರವೃಂದದವರೇ ಒಬ್ಬರಿಗೊಬ್ಬರ ಸಹಕಾರದಿಂದ ಈ ಅನುಷ್ಠಾನ ಮಾಡಿದ್ದು ವಿಶೇಷವಾಗಿತ್ತು. ಸಮಸ್ತ ಭಕ್ತ ಜನರ ದುಃಖಗಳು ದೂರಾಗಿ ನೆಮ್ಮದಿ ಸಿಗಲಿ. ವಿಶ್ವದಲ್ಲಿ ಶಾಂತಿ ನೆಲೆಸಲಿ ಎಂಬ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 