ನೆಹರೂ ವಿವಿ ಕ್ಯಾಂಪಸ್ ಮೇಲೆ ದಾಳಿ: ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ
ನವದೆಹಲಿ, ಜನವರಿ 6, ಜವಾಹರ ಲಾಲ್ ನೆಹರೂ ವಿಶ್ವವಿದ್ಯಾನಿಯಲದ ಕ್ಯಾಂಪಸ್ ಮೇಲೆ ಮುಸುಕುಧಾರಿ ಗೂಂಡಾಗಳು ನಡೆಸಿದ ಹಲ್ಲೆ, ಧಾಂದಲೆಗೆ ದೇಶದ ಉದ್ದಗಕ್ಕೂ ವ್ಯಾಪಕ ಟೀಕೆ ವ್ಯಕ್ತವಾಗಿ , ಇದನ್ನು ಖಂಡಿಸಿ ವಿದ್ಯಾರ್ಥಿಗಳ ಆಕ್ರೋಶ ಮಡುಗಟ್ಟಿದೆ. 'ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ದೇಶಾದ್ಯಂತ ವಿದ್ಯಾರ್ಥಿಗಳ ವಿರುದ್ಧ ಸಮರ ಸಾರಿ, ವಿಶ್ವವಿದ್ಯಾನಿಲಯಗಳನ್ನೂ ಆಶಾಂತಿಯ ಬೀಡನ್ನಾಗಿ ಮಾಡುತ್ತಿದೆ ಎಂದು ಜೆಎನ್ಯು ಮಾಜಿ ವಿದ್ಯಾರ್ಥಿ ನಾಯಕ ಕನ್ಹಯ್ಯ ಕುಮಾರ್ ಟೀಕಿಸಿದ್ದಾರೆ.
ಇದು ಲಜ್ಜೆಗೇಡಿ ಸರ್ಕಾರ. ಮೊದಲು ಶುಲ್ಕ ಏರಿಸಿತು. ವಿದ್ಯಾರ್ಥಿಗಳು ಇದಕ್ಕೆ ಪ್ರತಿಭಟನೆ ವ್ಯಕ್ತಪಡಿಸಿದಾಗ ಪೊಲೀಸರಿಂದ ಹಲ್ಲೆ ಮಾಡಿಸಿತು. ವಿದ್ಯಾರ್ಥಿಗಳು ಕದಲದಿದ್ದಾಗ ಸರ್ಕಾರ ಗೂಂಡಾಗಳನ್ನು ಕಳುಹಿಸಿ ಹಲ್ಲೆ ಮಾಡಿಸಿ ಅಮಾಯಕರ ಬಲಿಗೆ ಹಾತೊರೆಯುತ್ತಿದೆ ಎಂದು ಅವರು ಎಂದು ಟ್ವೀಟ್ ಮಾಡಿದ್ದಾರೆ.ದೊಣ್ಣೆ, ರಾಡ್ ಹಾಗೂ ಮತ್ತಿತರ ಮಾರಕ ಆಯುಧಗಳನ್ನು ಹೊಂದಿದ್ದ ಮುಸುಕುಧಾರಿಗಳು ರಾತ್ರಿ ಕ್ಯಾಂಪಸ್ಗೆ ನುಗ್ಗಿ ನಡೆಸಿದ ದಾಂಧಲೆಯಲ್ಲಿ ಜೆಎನ್ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಐಶ್ ಘೋಷ್ ಸೇರಿದಂತೆ 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಕ್ಯಾಂಪಸ್ನಲ್ಲಿ ಸುಮಾರು ಎರಡು ಗಂಟೆ ಕೋಲಾಹಲ ನಡೆದಿತ್ತು.ಈ ಘಟನೆ ಖಂಡಿಸಿ ದೇಶದಾದ್ಯಂತ ವಿಧ್ಯಾರ್ಥಿಗಳ ಪ್ರತಿಭಟನೆ ಭುಲೆದ್ದಿದೆ.ಕಾಲೇಜು ತರಗತಿ ಬಹಿಷ್ಕರಿಸಿ ಅನೇಕ ಕಡೆ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 