ಪಾನ ಬೀಡಾ ಅಂಗಡಿಗಳ ಮೇಲೆ ದಾಳಿ: ಗುಟ್ಕಾ ಮಾರಾಟ ಪತ್ತೆ: ದಂಡ
ಬೈಲಹೊಂಗಲದಲ್ಲಿ ಬಸ್ ನಿಲ್ದಾಣದಲ್ಲಿ ಪಾನ ಬೀಡಾ ಅಂಗಡಿಗೆ ರಾಜ್ಯ ತಂಬಾಕು ನಿಯಂತ್ರಣ ಘಟಕ ವಿಭಾಗಿಯ ಸಂಯೋಜಕ ಮಹಾಂತೇಶ ಉಳ
ಬೈಲಹೊಂಗಲ 04: ಪಟ್ಟಣದಲ್ಲಿ ತಂಬಾಕು ನಿಷೇಧ ದಳ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಪಾನ ಬೀಡಾ ಅಂಗಡಿಗಳ ಮೇಲೆ ಮಂಗಳವಾರ ದಿಡೀರ ದಾಳಿ ನಡೆಸಿ, ಗುಟ್ಕಾ ಮಾರಾಟ ಪತ್ತೆ ಹಚ್ಚಿ, ಎಚ್ಚರಿಕೆ ನೀಡಿ ದಂಡ ವಿಧಿಸಿದರು.
ತಂಬಾಕು ನಿಷೇಧ ಅಧಿಕಾರಿಗಳು ಹಾಗೂ ತಾಲೂಕು ಆರೋಗ್ಯಾಧಿಕಾರಿ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತದೊಂದಿಗೆ ನಗರದ ಬಸ್ ನಿಲ್ದಾಣ, ಸಂಗೊಳ್ಳಿ ರಾಯಣ್ಣ ವೃತ್ತ, ಬಜಾರ ರಸ್ತೆ, ಇಂಚಲ ರಸ್ತೆ ಪಾನಬೀಡಾ ಶಾಪ್ಗಳಿಗೆ ದಾಳಿ ಇಟ್ಟು ತಂಬಾಕು ಉತ್ಪನ್ನಗಳನ್ನು ರಾಜಾರೋಷವಾಗಿ ಮಾರುತ್ತಿದ್ದದ್ದನ್ನು ಪತ್ತೆಹಚ್ಚಿ, ರಾಜ್ಯದಲ್ಲಿ ತಂಬಾಕು ಉತ್ಪನ್ನ ಮಾರಾಟಕ್ಕೆ ನಿಷೇಧವಿದ್ದರೂ ಮಾರಾಟ ಮಾಡುತ್ತಿರುವ ಬಗ್ಗೆ ಅಂಗಡಿಗಳ ಮೇಲೆ ಸೆಕ್ಷೆನ್ 4 ರಲ್ಲಿ 7 ಕೇಸು, ಸೆಕ್ಷೆನ6 ಎ ರಲ್ಲಿ 14 ಕೇಸು, ಸೆಕ್ಷೆನ 6ಬಿ ರಲ್ಲಿ 4 ಕೇಸು ಒಟ್ಟು 25 ಕೇಸು ದಾಖಲಿಸಿ 3900 ದಂಡ ವಿಧಿಸಲಾಯಿತು.
ಪಟ್ಟಣದ ಪ್ರದೇಶದಲ್ಲಿ ತಂಬಾಕಿನಿಂದ ದುಷ್ಪಾರಿಣಾಮ ಆಗುತ್ತಿದ್ದು ಕೋಪ್ಟಾ ಕಾಯ್ದೆಯ ಯಶಸ್ವಿ ಅನುಷ್ಠಾನ ಕುರಿತು ತಾಲೂಕಿನಲ್ಲಿ ದಾಳಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ತಂಬಾಕು ನಿಯಂತ್ರಣ ಘಟಕ ವಿಭಾಗಿಯ ಸಂಯೋಜಕ ಮಹಾಂತೇಶ ಉಳ್ಳೆಗಡ್ಡಿ ಹೇಳಿದರು.
ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರ ಡಾ.ಶೈಲಾ ಪಾಟೀಲ, ಸಾಮಾಜಿಕ ಕಾರ್ಯಕತರ್ೆ ಕವಿತಾ ರಾಜನ್ನವರ, ಎಸೈ ಎಸ್.ಬಿ.ಮಾವೀನಕಟ್ಟಿ, ಎಫ್.ಬಿ. ವಾಯ್.ಜಿ.ಕುರಿ ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದ್ದರು. ದಾಳಿ ಕಾಲಕ್ಕೆ ಪಟ್ಟಣದಲ್ಲಿ ಸುಮಾರು 4 ಗಂಟೆಗಳ ಕಾಲ ಎಲ್ಲ ಪಾನ ಬೀಡಾ ಅಂಗಡಿಗಳು ಬಂದ್ ಆಗಿದ್ದವು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 