ಬಾಡಿಗೆ ಕೇಳುವ ನೆಪದಲ್ಲಿ ಬಂದು ಉಪನ್ಯಾಸಕಿ ಮೇಲೆ ಹಲ್ಲೆ: ಆರೋಪಿ ಪತ್ತೆ
Attack on female lecturer on pretext of asking for rent: Accused identified
ಬಾಡಿಗೆ ಕೇಳುವ ನೆಪದಲ್ಲಿ ಬಂದು ಉಪನ್ಯಾಸಕಿ ಮೇಲೆ ಹಲ್ಲೆ: ಆರೋಪಿ ಪತ್ತೆ
ಮುದ್ದೇಬಿಹಾಳ 25: ಪಟ್ಟಣದ ಸಾಯಿ ನಗರ ಬಡಾವಣೆಯಲ್ಲಿ ಕಳೆದ ದಿ. 21 ಶನಿವಾರದಂದು ಬಾಡಿಗೆ ಕೇಳುವ ನೆಪದಲ್ಲಿ ಬಂದು ಕಾಲೇಜು ಉಪನ್ಯಾಸಕಿ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಘಟನೆಗೆ ಸಂಬಂಧಿಸಿದಂತೆ ಸಧ್ಯ ಹಲ್ಯೆ ಮಾಡಿದ ಆರೋಪಿ ಮಾಹಿತಿ ಪೋಲಿಸರಿಗೆ ಲಭ್ಯವಾಗಿದೆ ಮಾತ್ರವಲ್ಲದೇ ತೆಲಂಗಾಣದ ರಾಜ್ಯದ ನಲಗೊಂಡ ಜಿಲ್ಲೆಯ ಅನುಮುಲ್ಲಾ ಮಂಡಲದ ಹಜಾರಿಗುಡದ ನಿವಾಸಿ ಪೇರುಮಾಳ ಸೈದಯ್ಯ ಧನುಂಜಯ ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಪಿಎಸ್ಐ ಸಂಜಯ ತಿಪರೆಡ್ಡಿ, ಈತ ಮನೆ ಬಾಡಿಗೆ ಕೇಳುವ ನೆಪದಲ್ಲಿ ಉಪನ್ಯಾಸಕಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕಳ್ಳತನ ಮಾಡಲು ಹೋಗಿದ್ದನೆಂದು ಆರೋಪಿ ಸತ್ಯ ಬಾಯ್ದಿಟ್ಟಿದ್ದಾನೆ. ಒಬ್ಬಂಟಿಯಾಗಿರುವ ಮಹಿಳೆಯರು ತಮ್ಮ ಮನೆಗಳಿಗೆ ಬಾಡಿಗೆ ಕೊಡಲು ಗುರ್ತು ಪರಿಚಿತರನ್ನು ಗುರುತಿಸಿ ಬಾಡಿಗೆ ಕೊಡುವಲ್ಲಿ ಮುಂದಾಗಬೇಕು. ಅಪರಿಚಿತರ ಬಗ್ಗೆ ಸ್ಪಲ್ಪ ಅವರ ಹಾವ ಭಾವದ ಬಗ್ಗೆ ನಿಗಾವಹಿಸಿ ಸಂಶಯ ಕಂಡುಬಂದರೆ ತಕ್ಷಣದಲ್ಲಿಯೇ ಪೋಲಿಸರಿಗೆ ದೂರು ನೀಡಿದರೇ ಇಂತಹ ಆರೋಪಿಗಳನ್ನು ಪತ್ತೆ ಹಚ್ಚಲು ಮತ್ತು ಮುಂದಾಗುವ ಅನಾಹುತಗಳನ್ನು ತಪ್ಪಿಸಲು ಸಹಕಾರಿಯಾಗಲಿದೆ ಎಂದು ನಾಗರಿಕರಲ್ಲಿ ವಿನಂತಿಸಿದ್ದಾರೆ.
ಹೆಚ್ಚುವರಿ ಎಸ್ಪಿ ಭೇಟಿ: ಉಪನ್ಯಾಸಕಿ ಸುಮಂಗಲಾ ಅಂಗಡಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಉಪನ್ಯಾಸಕಿಯ ಮನೆಗೆ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ ಭೇಟಿ ನೀಡಿ ಪರೀಶೀಲನೆ ನಡೆಸಿದರು. ಪಿಎಸ್ಐ ಸಂಜಯ್ ತಿಪರೆಡ್ಡಿ ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 