ತಂಬಾಕು ನಿಯಂತ್ರಣ ಘಟಕದಿಂದ ದಾಳಿ: 23 ಪ್ರಕರಣ ದಾಖಲು
ಬಾಗಲಕೋಟೆ: ಜಿಲ್ಲಾ ತಂಬಾಕು ನಿಯಂತ್ರಣ ಘಟಕದಿಂದ ನಗರ ಹಾಗೂ ಅಲಗೂರ ಗ್ರಾಮದ ವಿವಿಧ ಪ್ರದೇಶಗಳಲ್ಲಿ ತಂಬಾಕು ನಿಯಂತ್ರಣ ಕಾನೂನು ಕೋಟ್ಪಾ 2003 ರ ಅಡಿಯಲ್ಲಿ ದಾಳಿ ನಡೆಸಿ ಒಟ್ಟು 23 ಪ್ರಕರಣಗಳನ್ನು ದಾಖಲಿಸುವದರ ಜೊತೆಗೆ 2200 ರೂ.ಗಳ ದಂಡ ವಸೂಲಿ ಮಾಡಲಾಗಿದೆ.
ಬುಧವಾರ ಜಮಖಂಡಿ ನಗರದ ಹೋಟೆಲ್, ಬಸ್ ನಿಲ್ದಾಣದ ಅಂಗಡಿ ಮುಂಗಟ್ಟು ಹಾಗೂ ಶಾಲಾ ಕಾಲೇಜು ಬಳಿ ತಂಬಾಕು ಉತ್ಪನ್ನಗಳ ಮಾರಾಟ, ಅನಧಿಕೃತ ಜಾಹೀರಾತು ಪ್ರದರ್ಶನ ಸೇರಿದಂತೆ ಇನ್ನಿತರ ಉಲ್ಲಂಘಣೆ ವಿರುದ್ಧ ಕ್ರಮ ಜರುಗಿಸಿ ಪ್ರಕರಣ ದಾಖಲಿಸುವದರ ಜೊತೆಗೆ ದಂಡವನ್ನು ವಸೂಲಿ ಮಾಡಲಾಯಿತು.
ಅನಧಿಕೃತವಾಗಿ ಮಾವಾ ಮಾರಾಟ ಮಾಡುವುದ ಮಾಹಿತಿ ಬಂದಿದ್ದು, ಮಾವ ಮಾರಾಟ ಮಾಡುವವರಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತಿದೆ ಎಂದು ಎಚ್ಚರಿಕೆ ನೀಡಲಾಯಿತು.
ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ.
ಶೈಕ್ಷಣಿಕ ಸಂಸ್ಥೆಗಳ 100 ಗಜದ ಅಂತರದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡದಂತೆ ಅರಿವು ಮೂಡಿಸಲಾಯಿತು. ಹಾಗೂ ಅಂಗಡಿಗಳ ಮುಂದೆ ನಿಷೇಧಿತ ನಾಮಫಲಕವನ್ನು ಕಡ್ಡಾಯವಾಗಿ ಪ್ರದಶರ್ಿಸಬೇಕೆಂದು ಸೂಚಿಸಲಾಯಿತು. ದಾಳಿ ವೇಳೆಯಲ್ಲಿ ಜಮಖಂಡಿ ತಾಲೂಕ ಆರೋಗ್ಯ ಅಧಿಕಾರಿ ಡಾ.ಜಿ.ಎಸ್.ಗಲಗಲಿ, ಜಿಲ್ಲಾ ತಂಬಾಕು ಸಲಹೆಗಾರ ಶಶಿಕಾಂತ ಕುಮಠಳ್ಳಿ, ಶಿವಲಿಂಗ ಕರಗಣ್ಣಿ, ಹಿರಿಯ ಆರೋಗ್ಯ ಸಹಾಯಕ ಎಂ.ಹೆಚ್.ಕಡ್ಲಿಮಟ್ಟಿ ಹಾಗೂ ಜಮಖಂಡಿ ನಗರಸಭೆಯ ಸಂಜಯಕುಮಾರ, ಅನಿಲ ಗೇರಗಾಳ ಇದ್ದರು
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 