ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ಮೇಲೆ ದಾಳಿ
ಪಾನ್ಶಾಪ್ಗಳ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಸೂಲಿ
ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ಮೇಲೆ ದಾಳಿ
ಹಾವೇರಿ 26:ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಂಬಾಕು ಮುಕ್ತ ಯುವ ಅಭಿಯಾನದ ಅಂಗವಾಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ರಾಣೇಬೆನ್ನೂರ ನಗರದ ವಿವಿಧ ಧೂಮಪಾನ ಅಡ್ಡಾಗಳು ಹಾಗೂ ಪಾನ್ಶಾಪ್ಗಳ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಸೂಲಿ ಮಾಡಿದೆ.
ಪರವಾನಿಗೆ ಪಡೆಯದೇ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ಹಾಗೂ ಕಾಯ್ದೆ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ, ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ, ತಂಬಾಕು ನಿಯಂತ್ರಣ ಕಾಯ್ದೆ-2003ರ ಕಲಂ-6ಬಿ ಅಡಿಯಲ್ಲಿ 09 ಪ್ರಕರಣಗಳಿಂದ ದಂಡ ವಸೂಲಿ ಮಾಡಲಾಗಿದೆ. ಪರೋಕ್ಷವಾಗಿ ತಂಬಾಕು ಜಾಹೀರಾತು ಮಾಡುವ ಐದು ಫಲಕಗಳನ್ನು ತೆರವುಗೊಳಿಸಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 