ನಗರದ ವಿವಿಧ ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ಮೇಲೆ ದಾಳಿ
Attacks on various shops selling tobacco products in the city
ನಗರದ ವಿವಿಧ ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ಮೇಲೆ ದಾಳಿ
ಹಾವೇರಿ 06 : ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣ ಹಾಗೂ ಹಾವೇರಿ ನಗರದ ವಿವಿಧ ಧೂಮಪಾನ ಅಡ್ಡಾಗಳು ಹಾಗೂ ಪಾನ್ಶಾಪ್ಗಳ ಮೇಲೆ ದಾಳಿ ನಡೆಸಿ ದಂಡ ವಸೂಲಿ ಮಾಡಿದೆ.
ಪರವಾನಿಗೆ ಪಡೆಯದೇ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ಹಾಗೂ ಕಾಯ್ದೆ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ, ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ, ತಂಬಾಕು ನಿಯಂತ್ರಣ ಕಾಯ್ದೆ-2003ರ ಕಲಂ-6ಬಿ ಅಡಿಯಲ್ಲಿ 18 ಪ್ರಕರಣಗಳಿಂದ ರೂ.1,800 ಹಾಗೂ ಕಲಂ-4ರಡಿಯಲ್ಲಿ ಎರಡು ಪ್ರಕರಣಗಳಿಂದ ರೂ.200 ಸೇರಿ ಒಟು ರೂ.2,000/-ದಂಡ ವಸೂಲಿ ಮಾಡಲಾಗಿದೆ. ಪರೋಕ್ಷವಾಗಿ ತಂಬಾಕು ಜಾಹೀರಾತು ಮಾಡುವ ಐದು ಫಲಕಗಳನ್ನು ತೆರವುಗೊಳಿಸಲಾಗಿದೆ.
ಈ ತನಿಖಾ ದಾಳಿ ತಂಡದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಡಾ.ಸಂತೋಷ ದಡ್ಡಿ, ಸಮಾಜ ಕಾರ್ಯಕರ್ತ ದಾದಾಪೀರ ಹುಲಿಕಟ್ಟಿ, ಆರೋಗ್ಯ ನೀರೀಕ್ಷಣಾಧಿಕಾರಿ ಕೃಷ್ಣಪ್ಪ ಕನ್ನಮ್ಮನವರ, ಆರೋಗ್ಯ ನೀರಕ್ಷಕರಾದ ಶ್ರೀಮತಿ ಪರಿಮಳ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಶಿವಪ್ಪ ಲಮಾಣಿ, ಮಹೇಶ ಕುಮ್ಮೂರ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 