ಮನೆಗೆ ನುಗ್ಗಿ ದರೋಡೆಗೆ ಯತ್ನ: ಆರೋಪಿ ಏರಡು ಕಾಲಿಗೆ ಗುಂಡು ಹೊಡೆದು ವಶಕ್ಕೆ ಪಡೆದ ಪೊಲೀಸರು
Attempt to robbery : Accused was shot in the legs and taken into custody by the police
ಹುಬ್ಬಳ್ಳಿ28: ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಗ್ಯಾಂಗ್ ನ ಓರ್ವನಿಗೆ ಪೊಲೀಸರು ಏರಡು ಕಾಲಿಗೆ ಗುಂಡು ಹೊಡೆದು ವಶಕ್ಕೆ ಪಡೆದಿದ್ದು, ಈ ಸಂದರ್ಭದಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಗಾಯಾಳುಗಳು ಸದ್ಯ ಕೆಎಂಸಿಆರ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂಲತಃ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪಾಲಾ ವೆಂಕಟೇಶ್ವರ ಉರುಫ್ ಕಲ್ಯಾಣ ಕುಮಾರ ಎಂಬಾತನೇ ಪೊಲೀಸರಿಗೆ ಸಿಕ್ಕಿಬಿದ್ದ ನಟೋರಿಯಸ್ ದರೋಡೆಕೋರ. ಈತ ಹಾಗೂ ಮೂರ್ನಾಲ್ಕು ಜನರ ತಂಡವು ಶುಕ್ರವಾರ ತಡರಾತ್ರಿ ಧಾರವಾಡ ತಾಲೂಕಿನ ನವಲೂರಿನ ಹೊರವಲಯದಲ್ಲಿರುವ ವಿಕಾಸ್ ಕುಮಾರ್ ಎಂಬುವರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸುತ್ತಿದ್ದಾಗ, ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಯು ಸ್ಥಳಕ್ಕೆ ತೆರಳಿದಾಗ ದರೋಡೆಕೋರರು ಅವರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆಗ ಪಿಎಸ್ಐ ಪ್ರಮೋದ್ ಅವರು ಪಾಲಾ ವೆಂಕಟೇಶ್ವರ ಕಾಲಿಗೆ ಗುಂಡು ಹೊಡೆದು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಪಿಎಸ್ಐ ಮತ್ತು ಸಿಬ್ಬಂದಿ ಗಾಯಗೊಂಡಿದ್ದು, ಎಲ್ಲರೂ ಕೆಎಂಸಿಆರ್ಐ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಜೂನ್ 6ರಂದು ಇದೇ ವ್ಯಕ್ತಿ ನವಲೂರಿನಲ್ಲಿ ಅಶೋಕ ಕದಂ ಎಂಬುವರ ಮನೆಗೆ ನುಗ್ಗಿ, ಕಲ್ಲಿನಿಂದ ಬಾಗಿಲು ಒಡೆದು ಮನೆಯಲ್ಲಿದ್ದ ದಂಪತಿ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದರು. ಅದೇ ಪ್ರಕರಣದ ಆರೋಪಿ ಈತ ಎಂಬುದು ಕೂಡ ಈಗ ತಿಳಿದು ಬಂದಿದೆ. ಈತನ ಮೇಲೆ ಆಂಧ್ರದ ಕರಾವಳಿ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ರಾಜ್ಯಗಳಲ್ಲಿ 82ಕ್ಕೂ ಹೆಚ್ಚು ಇಂತಹುದೆ ಪ್ರಕರಣಗಳು ದಾಖಲಾಗಿವೆ. ಸ್ಟೂವರ್ಟ್ ಪುರಂ ಗ್ಯಾಂಗ್ನಲ್ಲಿ ಈತ ಗುರುತಿಸಿಕೊಂಡಿದ್ದ. ಇವರ ಅಪ್ಪ, ಅಜ್ಜ ಸೇರಿ ವಂಶಾವಳಿಯಾಗಿ ದರೋಡೆಕೋರರು ಆಗಿದ್ದಾರೆ. ಪರಾರಿಯಾದ ಇನ್ನುಳಿದವರ ಪತ್ತೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 