ವಿವಿಧ ಗ್ರಾಮಗಳ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುಧಾನ : ಶಾಸಕ ಪಠಾಣ
Attention to the renovation of temples in various villages: MLA Pathana
ಶಿಗ್ಗಾವಿ 03 : 2 ತಾಲೂಕಿನ ವಿವಿಧ ಗ್ರಾಮಗಳ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ಕೊಟ್ಟಿದ್ದರೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಅಸೂಯೆ, ಹೊಟ್ಟೆ ಕಿಚ್ಚು ವ್ಯಕ್ತಪಡಿಸುತ್ತಿದ್ದಾರೆ ಎಂದು ಶಾಸಕ ಯಾಸೀರಖಾನ್ ಪಠಾಣ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕಿನ ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಅನುದಾನದ ಚೆಕ್ ವಿತರಿಸಿ ಮಾತನಾಡಿದ ಅವರು ಹೊಸದಾಗಿ 70 ದೇವಸ್ಥಾನಗಳಿಗೆ 3.5 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಪಂಚಾಯತ್ ರಾಜ್, ಆರಾಧನಾ, ಮುಜರಾಯಿ, ಮುಖ್ಯಮಂತ್ರಿಗಳ ವಿಶೇಷ ಅನುದಾನ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಕ್ಷೇತ್ರದಲ್ಲಿ ದೇವಸ್ಥಾನಗಳ ನಿರ್ಮಾಣ, ಜೀರ್ಣೋದ್ಧಾರಕ್ಕಾಗಿ ಅನುದಾನ ತಂದಿದ್ದೇನೆ. ಇದಕ್ಕೆ ಹೊಟ್ಟೆ ಕಿಚ್ಚು, ಅಸೂಯೆ ವ್ಯಕ್ತಪಡಿಸುವ ವಿರೋಧಿಗಳಿಗೆ ಚೆಕ್ ಪಡೆದುಕೊಂಡವರು ಉತ್ತರ ನೀಡಬೇಕಿದೆ ಎಂದರು.
ಹಿಂದಿನ ಸರ್ಕಾರದಲ್ಲಿ ಭೂಮಿಪೂಜೆ ಮಾಡಿ ಹೋಗಿದ್ದರು. ನಮ್ಮ ಸರ್ಕಾರ ಅದಕ್ಕೆ ಅನುದಾನ ಕೊಟ್ಟು ಪೂರ್ಣಗೊಳಿಸುವ ಕೆಲಸ ಮಾಡುತ್ತಿದೆ. ವಿಶೇಷವಾಗಿ ಈ ಕ್ಷೇತ್ರದ ಅಭಿವೃದ್ಧಿಗೆ ಸಿಎಂ, ಡಿಸಿಎಂ, ಸಚಿವರು ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ. ಶಿಗ್ಗಾವಿ, ಬಂಕಾಪುರ, ಸವಣೂರ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರು ಪೂರೈಸುವ ಯೋಜನೆ, ಆಸ್ಪತ್ರೆಗಳ ಕಟ್ಟಡಗಳ ನಿರ್ಮಾಣ ಸೇರಿದಂತೆ ಎಲ್ಲ ವಲಯಗಳ ಅಭಿವೃದ್ಧಿಗೆ 1400 ಕೋಟಿ ರೂ. ಅನುದಾನ ತಂದಿದ್ದೇನೆ. 13 ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಿಸಿದ್ದೇನೆ. ವಿಶೇಷವಾಗಿ ಕೋಟ್ಯಂತರ ರೂಪಾಯಿ ಅನುದಾನದಲ್ಲಿ ದೇವಸ್ಥಾನಗಳ ಅಭಿವೃದ್ಧಿ, ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದರು. ತಹಸೀಲ್ದಾರ್ ಯಲ್ಲಪ್ಪ ಗೋಣೆಣ್ಣವರ, ವಿವಿಧ ಇಲಾಖೆಗಳ ಅಧಿಕಾರಿಗಳು, ಆರಾಧನಾ ಸಮಿತಿ ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 