ಲೆಕ್ಕ ಪರಿಶೋಧನೆ ಗ್ರಾಮ ಸಭೆ, ರೋಜಗಾರ ದಿನಾಚರಣೆ
ಹಾವೇರಿ 02: ತಾಲೂಕಿನ ಬಸಾಪುರ ಗ್ರಾಮ ಪಂಚಾಯತಿಯ ಪ್ರಸಕ್ತ ಸಾಲಿನ ಎರಡನೇ ಸುತ್ತಿನ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮ ಸಭೆ ಹಾಗೂ ರೋಜಗಾರ ದಿನಾಚರಣೆ ಕಾರ್ಯಕ್ರಮ ಸೋಮವಾರ ಬಸಾಪುರ ಗ್ರಾಮದಲ್ಲಿ ಜರುಗಿತು.
ತಾಲೂಕ ಸಾಮಾಜಿಕ ಲೆಕ್ಕ ಪರಿಶೋಧನೆ ಅಧಿಕಾರಿಗಳಾದ ಸಂಪತ್ತಕುಮಾರ ಪೂಜಾರ ಅವರು ಸಾಮಾಜಿಕ ಲೆಕ್ಕ ಪರಿಶೋಧನೆ ಕುರಿತು ಮಾಹಿತಿ ನೀಡಿದರು.
ತಾಲೂಕ ಪಂಚಾಯತಿಯ ಮಾಹಿತಿ ಶಿಕ್ಷಣ ಮತ್ತು ಸಂವಹನ ಅಧಿಕಾರಿಯಾದ ಗಿರೀಶ ಎಸ್ ಬೆನ್ನೂರ ಅವರು ರೋಜಗಾರ ದಿನಾಚರಣೆ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ವಿವರವಾದ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲ ಸದಸ್ಯರುಗಳು, ತಾಲೂಕ ನೋಡಲ್ ಅಧಿಕಾರಿಗಳಾದ ನಿಂಗನಗೌಡ ಹೆಚ್ ಕರೇಗೌಡ್ರ, ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳಾದ ಎನ್.ಎಮ್.ಬಡಿಗೇರ, ವಿವಿಧ ಇಲಾಖೆಯವರು, ಆಶಾ ಕಾರ್ಯಕತರ್ೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಉದ್ಯೋಗ ಚೀಟಿ ಪಡೆದ ಕೂಲಿ ಕಾರ್ಮಿಕರು ಭಾಗವಹಿಸಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 