ಆಗಸ್ಟ್ 20 ರಂದು ಡಿ ದೇವರಾಜ ಅರಸು ಜಯಂತಿ
August 20th Devaraja Aras Jayanti celebration
ಹುಬ್ಬಳ್ಳಿ ಆ.14: ಪ್ರತಿ ವರ್ಷದಂತೆ ಈ ವರ್ಷವು ಕೂಡ ಅದ್ದೂರಿಯಾಗಿ ಆ.20 ರಂದು ಡಿ ದೇವರಾಜ ಅರಸು ಜಯಂತಿ ಆಚರಣೆ ಮಾಡಲಾಗುವುದು ಎಂದು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಜೇ. ಬಿ. ಮಜ್ಜಗಿ ಅವರು ಹೇಳಿದರು.
ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಡಿ ದೇವರಾಜ ಅರಸು ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಅಂದು ಬೆಳಿಗ್ಗೆ 10 ಗಂಟೆಗೆ ತಾಲೂಕು ಆಡಳಿತ ಸಭಾಭವನದಲ್ಲಿ ಶ್ರೀ ದೇವರಾಜ ಅರಸು ರವರ ಜಯಂತಿ ಆಚರಣೆ ಮಾಡಲಾಗುತ್ತದೆ. ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ,ಸಮಾಜದ ಸಾಧಕ ಮಹಿಳೆಯರಿಗೆ ಸನ್ಮಾನ ಮಾಡಲಾಗುವದು, ಪ್ರಬಂಧ ಸ್ಪರ್ಧೆ, ಹಾಗೂ ಸಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಮುಖಂಡರು ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.
ಪೂರ್ವಭಾವಿ ಸಭೆಯಲ್ಲಿ ,ಹಿಂದುಳಿದ ವರ್ಗಗಳ ಇಲಾಖೆಯ ಸಹಾಯಕ ನಿರ್ದೇಶಕಿ ನಾಗರತ್ನಾ ಕ್ಯಾಸನೂರ, ರೈತ ಮುಖಂಡರು ಡಾ.ಡಿ. ಟಿ. ಪಾಟೀಲ್, ಸಂಜುಕುಮಾರ ಸಮಾಜದ ಮುಖಂಡರು,ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 