ಅಗುಸ್ತಾ ವೆಸ್ಟ್ಲ್ಯಾಂಡ್ ಪ್ರರಕಣ: ಸುಪ್ರೀಂ ಕೋರ್ಟ್ ನಿಂದ ಕ್ರಿಶ್ಚಿಯನ್ ಮಿಶೆಲ್ ಜಾಮೀನು ಅರ್ಜಿ ತಿರಸ್ಕೃತ
ನವದೆಹಲಿ, ಏಪ್ರಿಲ್ 22,ಅಗುಸ್ತಾ ವೆಸ್ಟ್ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣ ಪ್ರಕರಣದಲ್ಲಿ ಕ್ರಿಶ್ಚಿಯನ್ ಮಿಶೆಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ.
‘ಅಗುಸ್ತಾ ವೆಸ್ಟ್ಲ್ಯಾಂಡ್ ಖರೀದಿ ಪ್ರಕರಣದಲ್ಲಿ ಆರೋಪಿ ಕ್ರಿಶ್ಚಿಯನ್ ಮಿಶೆಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸುತ್ತಿದೆ.’ ಎಂದು ನ್ಯಾಯಮೂರ್ತಿ ಎಸ್.ಕೆ.ಕೌಲ್ ನೇತೃತ್ವದ ನ್ಯಾಯಪೀಠ ಹೇಳಿದೆ.‘ತನ್ನ ವಯಸ್ಸು 59 ವರ್ಷ ಮೀರಿದ್ದು, ಆರೋಗ್ಯ ಸರಿಯಾಗಿಲ್ಲ. ಈ ಹಿಂದೆ ಅನೇಕ ಬಾರಿ ಅನಾರೋಗ್ಯಕ್ಕೆ ತುತ್ತಾಗಿದ್ದೇನೆ. ಇದೀಗ ಜಾಮೀನು ಸಿಗದಿದ್ದರೆ ಕೊರೋನವೈರಸ್ ಸೋಂಕಿಗೆ ಸುಲಭವಾಗಿ ತುತ್ತಾಗುತ್ತೇನೆ.’ ಎಂದು ಮಿಶೆಲ್ ಮನವಿ ಅರ್ಜಿಯಲ್ಲಿ ಹೇಳಿದ್ದಾನೆ.ಜೈಲಿನಲ್ಲಿದ್ದಾಗ ಕೊವಿದ್-19 ಸೋಂಕಿಗೆ ತುತ್ತಾಗಬಹುದು ಎಂಬ ಆತಂಕ ವ್ಯಕ್ತಪಡಿಸಿ, ಜಾಮೀನು ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ನಂತರ ಮಿಶೆಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ. ಮೈಕೆಲ್ ಪ್ರಕರಣವು ‘ಮಧ್ಯಂತರ ಪರಿಹಾರ ನೀಡುವ ಮಾನದಂಡಗಳಡಿ ಬರುವುದಿಲ್ಲ.’ ಎಂಬ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 