ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಗೆ ಚಾಲನೆ
ಲೋಕದರ್ಶನ ವರದಿ
ಬಾಗಲಕೋಟೆ 9: ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆಯುಷ್ಮಾನ ಭಾರತ-ಆರೋಗ್ಯ ಕನರ್ಾಟಕ ಯೋಜನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮಂಗಳವಾರ ಚಾಲನೆ ನೀಡಿದರು.
ನಂತರ ಜಿಲ್ಲಾ ಆಸ್ಪತ್ರೆಗೆ ನೀಡಿದ ಹೊಸ ಅಂಬುಲೇನ್ಸ್ ವಾಹನವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು ಆಯುಷ್ಮಾನ ಭಾರತ ಆರೋಗ್ಯ ಯೋಜನೆಯಿಂದ ಪ್ರಾಥಮಿಕ, ಸಾಮಾನ್ಯ ದ್ವೀತಿಯ, ಸಂಕೀರ್ಣ ದ್ವಿತೀಯ, ತೃತೀಯ ಹಾಗೂ ತುತರ್ು ಹಂತದ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ. ರೋಗಿಗಳನ್ನು ಅರ್ಹತಾ ರೋಗಿಗಳು ಮತ್ತು ಸಾಮಾನ್ಯ ರೋಗಿಗಳು ಎಂದು ವರ್ಗಗಳಾಗಿ ವಿಂಗಡಿಸಿ ಚಿಕಿತ್ಸೆ ನೀಡಲಾಗುತ್ತದೆ ಎಂದರು.
ಬಿಪಿಎಲ್ ಕಾರ್ಡ ಹೊಂದಿದ ಅರ್ಹತಾ ರೋಗಿಗಳಿಗೆ ವರ್ಷಕ್ಕೆ 5 ಲಕ್ಷಗಳ ವರೆಗೆ ಚಿಕಿತ್ಸೆ ಒದಗಿಸಲಾಗುತ್ತಿದೆ. ಎಪಿಎಲ್ ಕಾರ್ಡ ಹೊಂದಿದ ಸಾಮಾನ್ಯ ರೋಗಿಗಳಿಗೆ ಪ್ಯಾಕೇಜ ದರದ ಶೇ.30 ರಷ್ಟು ಇದ್ದು, ಸಹ ಪಾವತಿ ಆಧಾರದ ಮೇಲೆ ಒಟ್ಟಾರೆ ವಾಷರ್ಿಕ ಪ್ರತಿ ಕುಟುಂಬಕ್ಕೆ ರೂ.1.50 ಲಕ್ಷ ಹಾಗೂ ಒಂದು ಕುಟುಂಬದಲ್ಲಿ 5 ಜನರಿಗೆ ಮಾತ್ರ ಸೌಲಭ್ಯ ಪಡೆಯಲು ಅವಕಾಶವಿದ್ದು, ಸಾರ್ವಜನಿಕರುಗೀ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪ್ರಕಾಶ ಬಿರಾದಾರ, ಆರೋಗ್ಯ ಮಿತ್ರದ ಜಿಲ್ಲಾ ಸಂಚಾಲಕ ಸಂಗಮೇಶ ಬಿರಾದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 