ತ.ನಾಡಿಗೆ 31ಟಿಎಂಸಿ ನೀರು ಬಿಡಲು ಪ್ರಾಧಿಕಾರ ಸೂಚನೆ
ತಮಿಳುನಾಡಿಗೆ 31.24 ಟಿಎಂಸಿ ನೀರು
ನವದೆಹಲಿ 02: ಸುಪ್ರೀಂ ಕೋಟರ್್ ಆದೇಶದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 31.24 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೋಮವಾರ ಕನರ್ಾಟಕಕ್ಕೆ ಸೂಚನೆ ನೀಡಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾದ ನಂತರ ಇಂದು ನಡೆದ ಮೊದಲ ಸಭೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಕುರಿತು ಚಚರ್ೆ ನಡೆಸಿ, ಸುಪ್ರೀಂ ಆದೇಶದಂತ ಕನರ್ಾಟಕ ಈಗಾಗಲೇ ಜೂನ್ ತಿಂಗಳಿನಲ್ಲಿ ನಿಗದಿಗಿಂತ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಿದೆ. ಸುಮಾರು 2.5ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಬಿಡಲಾಗಿದೆ. ಹೀಗಾಗಿ ಕೇಂದ್ರ ಜಲ ಆಯೋಗದಿಂದ ಅಂಕಿ-ಅಂಶ ಪಡೆದು ನೀರನ್ನು ಬಿಡುವ ಬಗ್ಗೆ ನಿಧರ್ಾರ ಕೈಗೊಳ್ಳುವುದಾಗಿ ಕನರ್ಾಟಕ ತಿಳಿಸಿದೆ.
ಕೇಂದ್ರ ಜಲಮಂಡಳಿ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಎಸ್. ಮಸೂದ್ ಹುಸೇನ್ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯದ ಪ್ರತಿನಿಧಿಯಾಗಿ ಜಲ ಸಂಪನ್ಮೂಲ ಇಲಾಖೆ ಕಾರ್ಯದಶರ್ಿ ರಾಕೇಶ್ ಸಿಂಗ್ ಅವರು ಭಾಗವಹಿಸಿದ್ದರು.
ಇನ್ನು ಪ್ರಾಧಿಕಾರದ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು, ತರಾತುರಿಯಲ್ಲಿ ನಾನು ಏನನ್ನೂ ಹೇಳೋದಿಲ್ಲ. ತಮಿಳುನಾಡು ಅಗತ್ಯಕ್ಕಿಂತ ಹೆಚ್ಚು ನೀರಿನ ಬೇಡಿಕೆ ಇಟ್ಟಿದೆ. ಅವ್ರು ಹೇಳಿದ ಕೂಡಲೇ ಬಿಡೋದಕ್ಕೆ ನೀರು ಬೇಕಲ್ವಾ ಎಂದು ಪ್ರಶ್ನಿಸಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 