ತ.ನಾಡಿಗೆ 31ಟಿಎಂಸಿ ನೀರು ಬಿಡಲು ಪ್ರಾಧಿಕಾರ ಸೂಚನೆ
ತಮಿಳುನಾಡಿಗೆ 31.24 ಟಿಎಂಸಿ ನೀರು
ನವದೆಹಲಿ 02: ಸುಪ್ರೀಂ ಕೋಟರ್್ ಆದೇಶದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 31.24 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೋಮವಾರ ಕನರ್ಾಟಕಕ್ಕೆ ಸೂಚನೆ ನೀಡಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾದ ನಂತರ ಇಂದು ನಡೆದ ಮೊದಲ ಸಭೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಕುರಿತು ಚಚರ್ೆ ನಡೆಸಿ, ಸುಪ್ರೀಂ ಆದೇಶದಂತ ಕನರ್ಾಟಕ ಈಗಾಗಲೇ ಜೂನ್ ತಿಂಗಳಿನಲ್ಲಿ ನಿಗದಿಗಿಂತ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಿದೆ. ಸುಮಾರು 2.5ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಬಿಡಲಾಗಿದೆ. ಹೀಗಾಗಿ ಕೇಂದ್ರ ಜಲ ಆಯೋಗದಿಂದ ಅಂಕಿ-ಅಂಶ ಪಡೆದು ನೀರನ್ನು ಬಿಡುವ ಬಗ್ಗೆ ನಿಧರ್ಾರ ಕೈಗೊಳ್ಳುವುದಾಗಿ ಕನರ್ಾಟಕ ತಿಳಿಸಿದೆ.
ಕೇಂದ್ರ ಜಲಮಂಡಳಿ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಎಸ್. ಮಸೂದ್ ಹುಸೇನ್ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯದ ಪ್ರತಿನಿಧಿಯಾಗಿ ಜಲ ಸಂಪನ್ಮೂಲ ಇಲಾಖೆ ಕಾರ್ಯದಶರ್ಿ ರಾಕೇಶ್ ಸಿಂಗ್ ಅವರು ಭಾಗವಹಿಸಿದ್ದರು.
ಇನ್ನು ಪ್ರಾಧಿಕಾರದ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು, ತರಾತುರಿಯಲ್ಲಿ ನಾನು ಏನನ್ನೂ ಹೇಳೋದಿಲ್ಲ. ತಮಿಳುನಾಡು ಅಗತ್ಯಕ್ಕಿಂತ ಹೆಚ್ಚು ನೀರಿನ ಬೇಡಿಕೆ ಇಟ್ಟಿದೆ. ಅವ್ರು ಹೇಳಿದ ಕೂಡಲೇ ಬಿಡೋದಕ್ಕೆ ನೀರು ಬೇಕಲ್ವಾ ಎಂದು ಪ್ರಶ್ನಿಸಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 