ಆಟೋ ರಿಕ್ಷಾ ಚಾಲಕರ ಸಂಘದಿಂದ ತಾಯಿಭುವನೇಶ್ವರಿಗೆ ಮಾಲಾರ್ಪಣೆ

ಆಟೋ ರಿಕ್ಷಾ ಚಾಲಕರ ಸಂಘದಿಂದ ತಾಯಿಭುವನೇಶ್ವರಿಗೆ ಮಾಲಾರ್ಪಣೆ  Auto Rickshaw Drivers Association offers garland to Mother Bhuvaneshwari

ಹುಬ್ಬಳ್ಳಿ 04: 70ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಅಕ್ಷಯ ಕಾಲೋನಿಯ ಹತ್ತಿರ ಇರುವ ಆಟೋ ರಿಕ್ಷಾ ಚಾಲಕರ ಸಂಘದವರು ಆಟೋದಲ್ಲಿ ಪ್ರತಿಸ್ಥಾಪಿಸಿದ ತಾಯಿಭುವನೇಶ್ವರಿ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯವತಿಯಿಂದ  ಮಾಲಾರೆ​‍್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವ ನಮನ ಸಲ್ಲಿಸಲಾಯಿತು. 

ಸುಜಯ ಸುರೇಶ ಹೊರಕೇರಿ, ಸೋಹನ್ಸುರೇಶ ಹೊರಕೇರಿ,  ಸಹನಾಸುರೇಶಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕವಚನ ಸಾಹಿತ್ಯ ಪರಿಷತ್‌ನ ಜಿಲ್ಲಾಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ,  ಗ್ರಂಥಪಾಲಕಡಾ. ಸುರೇಶಡಿ. ಹೊರಕೇರಿ, ಅಟೋ ಚಾಲಕರು, ಮುಂತಾದವರು ಇದ್ದರು. ಅಟೋ ಚಾಲಕರ ಕನ್ನಡ ಭಾಷೆಯ ಮೇಲಿನ ಪ್ರೀತಿ, ಅಭಿಮಾನವನ್ನು ಕಂಡು ಗ್ರಂಥಪಾಲಕ ಡಾ. ಸುರೇಶಡಿ. ಹೊರಕೇರಿ ಅವರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.