ಮಂಗಳೂರಿನ ದೇರಳಕಟ್ಟೆಯಲ್ಲಿ ಅಟೋಮಬೈಲ್ ಅಂಗಡಿ ಬೆಂಕಿಗೆ ಆಹುತಿ: ದುಷ್ಕರ್ಮಿಗಳ ಕೈವಾಡ ಶಂಕೆ
ಮಂಗಳೂರು, ಜ 17 : ನಗರದ ದೇರಳಕಟ್ಟೆಯಲ್ಲಿನ ಅಟೋಮಬೈಲ್ ಅಂಗಡಿಯೊಂದು ಶುಕ್ರವಾರ ಬೆಂಕಿಗೆ ಆಹುತಿಯಾಗಿದ್ದು, ಅಂಗಡಿ ಮಾಲೀಕನಿಗೆ ಭಾರೀ ನಷ್ಟವಾಗಿದೆ.
ಶನಿವಾರ ಬೆಳಿಗ್ಗೆ ಅಂಗಡಿ ಮಾಲೀಕ ಬಾಗಿಲು ತೆರೆದಾಗ ಘಟನೆ ನಡೆದಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದುಷ್ಕರ್ಮಿಗಳು ಅಂಗಡಿಗೆ ಬೆಂಕಿ ಇಟ್ಟಿರಬಹುದೆಂದು ಸ್ಥಳೀಯರು ಶಂಕಿಸಿದ್ದು, ಶುಕ್ರವಾರ ರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಆರಂಭಿಸಲಾಗಿದೆ.
ಇತ್ತೀಚೆಗೆ ಇದೇ ಪ್ರದೇಶದಲ್ಲಿ ಸಿಎಎ ವಿರುದ್ಧದ ಪ್ರತಿಭಟನಾ ಸಮಾವೇಶಕ್ಕಾಗಿ ಕುರ್ಚಿಗಳನ್ನು ತುಂಬಿದ್ದ ಲಾರಿಯೊಂದಕ್ಕೆ ರಾತ್ರಿ ವೇಳೆ ಬೆಂಕಿ ಹಚ್ಚಲಾಗಿತ್ತು. ಇದರಿಂದ ಕುರ್ಚಿಗಳ ಸಮೇತ ಲಾರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿತ್ತು. ಈ ಘಟನೆಯಿಂದ ಮೊದಲೇ ಗಲಭೆಗಳಿಂದ ಭಯ-ಭೀತರಾಗಿದ್ದ ನಗರದ ಜನರು ಮತ್ತೆ ಆತಂಕಕ್ಕೆ ಒಳಗಾಗಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 