ಕು.ಅವನಿ ಮಹೀಂದ್ರಕರ್ ಪ್ರಾದೇಶಿಕ ವಿಜೇತೆ
Avani Mahindrakar is the regional winner
ಧಾರವಾ 27: ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿಯ ಕು. ಅವನಿ ಮಹೀಂದ್ರಕರ್ 2024 ರ ನವೆಂಬರ್ ಇನ್ಟ್ಯಾಕ್ ನಡೆಸಿದ ಪೋಸ್ಟರ್ ತಯಾರಿಕೆ ಸ್ಪರ್ಧೆಯಲ್ಲಿ ಪ್ರಾದೇಶಿಕ ವಿಜೇತರಾಗಿ ಆಯ್ಕೆಯಾಗಿದ್ದಾರೆ.
ಇದು ದೆಹಲಿಯ ಇನ್ಟ್ಯಾಕ್ ಆಶ್ರಯದಲ್ಲಿ ನಡೆದ ಅಖಿಲ ಭಾರತ ಪೋಸ್ಟರ್ ತಯಾರಿಕೆ ಸ್ಪರ್ಧೆಯಾಗಿದ್ದು, ವಿದ್ಯಾರ್ಥಿಗಳು ನಮ್ಮ ಪ್ರದೇಶದ ಯಾವುದೇ ಅಮೂರ್ತ ಸಂಸ್ಕೃತಿ ಪರಂಪರೆಯನ್ನು ಬರೆಯುವ ಘೋಷಣೆಯೊಂದಿಗೆ ಚಿತ್ರಿಸಬೇಕೆಂದು ನೀರೀಕ್ಷಿಸಲಾಗಿತ್ತು. ಕುಮಾರಿ. ಅವನಿ ಮಹೀಂದ್ರಕರ್ ನಮ್ಮ ಜೆ.ಎಸ್.ಎಸ್ ಕ್ಯಾಂಪಸ್ನ ಭಾಗವಾಗಿರುವ ಶ್ರೀ ಮೈಲಾರ ಲಿಂಗ ಸ್ವಾಮಿಯ ಕಥೆಯನ್ನು ಚಿತ್ರಿಸುವ ಮೂಲಕ ಸ್ಪರ್ಧೆಯನ್ನು ಗೆದ್ದಿದ್ದಾರೆ.
ಇನ್ಟ್ಯಾಕ್ ಧಾರವಾಡ ಸಂಚಾಲಕ ಕರ್ನಲ್ ಮೋಹನ್ ಮಠ ಮತ್ತು ಇನ್ಟ್ಯಾಕ್ ಧಾರವಾಡದ ಇತರ ಸದಸ್ಯರು ಅವನಿ ಮತ್ತು ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಇತರ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಪ್ರಾಚಾರ್ಯೆ ರೇಣು ಪಾಟೀಲ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 