ಪಿಡಿಓ ಜಮೀಲ್ ಅಹ್ಮದಗೆ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ಕೊಪ್ಪಳ 13: ಡಾ. ಸರ್.ಎಂ. ವಿಶ್ವೇಶ್ವರಯ್ಯ ಪ್ರತಿಷ್ಠಾನ ಹಾಗೂ ಸುರ್ವೆ ಕಲ್ಚರಲ್ ಅಕಾಡಮಿ ವತಿಯಿಂದ ಬೆಂಗಳೂರಿನ ನಯನ ಕಲಾ ಭವನದಲ್ಲಿ ಜರುಗಿದ ರಾಜ್ಯ ಮಟ್ಟದ ಡಾ.ವಿ.ಕೃ.ಗೋಕಾಕ್ ರಾಷ್ಟ್ರೀಯ ಕಲಾ ಪ್ರತಿಭೋತ್ಸವ ಗೋಕಾಕ್ ವರದಿ ಒಂದು ಚಿಂತನೆ ಎಂಬ ವಿಚಾರ ಸಂಕೀರ್ಣದಲ್ಲಿ ಅವರ ಗ್ರಾಮೀಣ ಜನರ ಉತ್ತಮ ಸೇವೆಗಾಗಿ ಕರ್ನಾಟಕ ವಿಕಾಶ ರತ್ನ ಪ್ರಶಸ್ತಿಯನ್ನು ಪಿಡಿಓ ಜಮೀಲ್ ಅಹ್ಮದಗೆ ಪ್ರದಾನ ಮಾಡಲಾಯಿತು.
ಪಿಡಿಓ ಜಮೀಲ್ ಅಹ್ಮದ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಖೆಡಾ ಗ್ರಾಮ ಪಂಚಾಯತ್ಯಲ್ಲಿ ಪಿಡಿಓ ಯಾಗಿ ಕಾರ್ಯ ನಿರ್ವಹಿಸುತ್ತಿದ್ದು ಇವರ ಕಾರ್ಯ ಮತ್ತು ಉತ್ತಮ ಸೇವೆ ಹಾಗೂ ಗ್ರಾಮೀಣಾಭಿವೃದ್ಧಿಗಾಗಿ ಕ್ಷೇತ್ರದಲ್ಲಿನ ಸೇವೆಗಾಗಿ ಸದರಿಯವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಘಟಕ ರಮೇಶ್ ಸುವರ್ೆ ಸಹಕಾರಿ ಮುಖಂಡ ಶೇಖರಗೌಡ ಮಾಲಿ ಪಾಟೀಲ್, ಚಲನಚಿತ್ರ ನಟರಾದ ಚಿಕ್ಕಮಾದು, ಚಿಕ್ಕಜಾಜುರು, ಮೀನಾ ಹಾಗೂ ಬ್ಯಾಂಕ್ ಜನಾರ್ಧನ್ ಮತ್ತು ನಿವೃತ್ತ ಅಧಿಕಾರಿ ಕೆ.ಮಲ್ಲಿನಾಥ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 