125 ದಿನಗಳ ಉದ್ಯೋಗ ಖಾತರಿ ಹಿ ವಲಸೆ ತಪ್ಪಿಸಲು ಗ್ರಾಮೀಣ ಕಾರ್ಮಿಕರಿಗೆ ಜಾಗೃತಿ
Awareness for rural workers about the 125-day employment guarantee to prevent migration
ಹೂವಿನಹಡಗಲಿ 24: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಜಿಎನ್ಆರಿ್ಜಎ) ಅಡಿಯಲ್ಲಿ ಗ್ರಾಮೀಣ ಬಡ ಕುಟುಂಬಗಳಿಗೆ ವರ್ಷಕ್ಕೆ 125 ದಿನಗಳ ಉದ್ಯೋಗ ಖಾತರಿ ಕಲ್ಪಿಸಲಾಗಿದ್ದು, ಉದ್ಯೋಗ ಅರಸಿ ಬೇರೆ ನಗರಗಳಿಗೆ ವಲಸೆ ಹೋಗದೆ ಯೋಜನೆಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಲೂಕು ಐಇಸಿ ಸಂಯೋಜಕ ಪ್ರಕಾಶ ನಾಯಕ್ ಹೇಳಿದರು.
ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಯ ಆದೇಶದಂತೆ ತಾಲೂಕಿನ ಹಿರೇಮಲ್ಲನಕೆರೆ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಎಂಜಿಎನ್ಆರಿ್ಜಎ ಜನಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಂಜಿಎನ್ಆರಿ್ಜಎ ಯೋಜನೆಯಡಿ ಗ್ರಾಮದಲ್ಲಿಯೇ ಉದ್ಯೋಗ ದೊರೆಯುತ್ತಿದ್ದು, ದಿನಗೂಲಿ ?370ರಿಂದ ?382ಕ್ಕೆ ಹೆಚ್ಚಿಸಲಾಗಿದೆ. ಅಲ್ಲದೆ, ವಾರ್ಷಿಕ ಉದ್ಯೋಗ ಖಾತರಿಯನ್ನು 100 ದಿನಗಳಿಂದ 125 ದಿನಗಳಿಗೆ ವಿಸ್ತರಿಸಿರುವುದರಿಂದ ಗ್ರಾಮೀಣ ಕಾರ್ಮಿಕರು ಇದರ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗದ ಕೊರತೆಯಿಂದ ವಲಸೆ ಹೋಗುವುದನ್ನು ತಡೆಯುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಯೋಜನೆ ಕುರಿತು ಕರಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ ನಾಯಕ್, ಕಾರ್ಯದರ್ಶಿ ಗುರುಬಸವರಾಜ, ಬಿಎಫ್ಟಿ ವಿಶ್ವನಾಥ, ಡಿಇಒ ಸಂತೋಷ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ 