ಕೊರೋನಾ ಬಗ್ಗೆ ಪೊಲೀಸರಿಂದ ಜಾಗೃತಿ
ಹಾವೇರಿ,
ಏ.19,ಜಾಗತಿಕವಾಗಿ ಬಾಧಿಸುತ್ತಿರುವ ಕೋವಿಡ್-19 ಸೋಂಕಿನ ವಿರುದ್ಧ
ಹೋರಾಡುತ್ತಿರುವ ಪೊಲೀಸರು ಕೊರೊನಾ ವಾರಿಯರ್ಸ್ ನಂತೆ ಹಗಲಿರುಳು ದುಡಿಯುತ್ತಿದ್ದಾರೆ.
ಇಂತಹ ಕೊರೊನಾ ವಾರಿಯರ್ಸ್ ಪೊಲೀಸರಿಂದು ಹಿರೇಕೆರೂರು, ಹಂಸಬಾವಿ ಸೇರಿದಂತೆ ವಿವಿಧೆಡೆ
ವಾಹನದ ಮೂಲಕ ರಾಲಿ ನಡೆಸಿ ಕೊರೊನಾ ಕುರಿತು ಜಾಗೃತಿ ಮೂಡಿಸಿದರು. ಪೊಲೀಸರ ಈ
ಸೇವೆಗೆ ಹಿರೇಕೆರೂರು ಮತಕ್ಷೇತ್ರದ ಶಾಸಕರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್
ವಂದನೆ ಸಲ್ಲಿಸಿ ಪೊಲೀಸರ ಕರ್ತವ್ಯ ಸೇವೆಯನ್ನು ಶ್ಲಾಘಿಸಿದರು.ಜಾಗೃತಿ ಜಾಥಾದಲ್ಲಿ
ಡಿವೈಎಸ್ಪಿ ಟಿ.ಸುರೇಶ್, ಎಸ್ಪಿ ಕೆ.ಜೆ.ದೇವರಾಜ್ ಎಎಸ್ಪಿ ಮಲ್ಲಿಕಾರ್ಜುನ್
ಸೇರಿದಂತೆ ಪಿಎಸ್ಐ ಸಿಪಿಐ , ಇತರೆ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.ಈ
ಸಂದರ್ಭದಲ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ್ ಕೃಷಿ ಸಚಿವರಿಗೆ ಸಾಥ್
ನೀಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 