ವಿಶೇಷ ಚೇತನರು ಸ್ವಾವಲಂಬಿಗಳಾಗಲು ಜಾಗೃತಿ ಅಗತ್ಯ: ಬಿರಾದಾರ
Awareness is needed for the mentally challenged to become self-reliant: Biradaar
ಲೋಕದರ್ಶನ ವರದಿ
ಸಿಂದಗಿ 18: ಸರ್ಕಾರವು ವಿಶೇಷ ಚೇತನರಿಗಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ ಅರಿವು ಹೊಂದಿದರೆ ಜೀವನ ಮಟ್ಟವನ್ನು ಉತ್ತಮ ಗೊಳಿಸಿಕೊಳ್ಳಬಹುದು ಎಂದು ಸಿಂದಗಿ ಹೆಸ್ಕಾಂ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಜಿ.ಎಂ.ಬಿರಾದಾರ ಹೇಳಿದರು.
ಸಿಂದಗಿ ಬಸವ ನಗರದಲ್ಲಿರುವ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದಲ್ಲಿ ವಿಶೇಷ ಚೇತನರ ಹಕ್ಕುಗಳು ಹಾಗೂ ಸರ್ಕಾರಿ ಸೌಲಭ್ಯಗಳ ಕುರಿತು ಹಮ್ಮಿಕೊಂಡ ತರಬೇತಿ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ವಿಶೇಷ ಚೇತನರು ಸಮಾಜದ ಮುಖ್ಯ ವಾಹಿನಿಯಲ್ಲಿ ಆತ್ಮ ವಿಶ್ವಾಸದಿಂದ ಬದುಕಲು ಶಿಕ್ಷಣ, ಸ್ವಾವಲಂಬನೆ ಹಾಗೂ ಜಾಗೃತಿ ಅತ್ಯಂತ ಅಗತ್ಯವೆಂದು ಎಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಸಂಗಮ ಸಂಸ್ಥೆಯ ಸಹನಿರ್ದೇಶಕಿ ಸಿಸ್ಟರ ಪ್ರಿಯಾಂಕಾ ಅವರು ಮಾತನಾಡಿದರು. ಶಂಕರಗೌಡ ಹನುಮಗೊಂಡ, ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಸಂತೋಷ್, ಮಹೇಶ ಚವ್ಹಾಣ ಸೇರಿದಂತೆ ಸಿಂದಗಿ, ಬಬಲೇಶ್ವರ, ಮನ್ನಾಪುರ, ಬಂಟನೂರ ಹಾಗೂ ವಂದಾಲ ಗ್ರಾಮದ ವಿಶೇಷ ಚೇತನರ ಸಂಘದ ಸದಸ್ಯರು ಮತ್ತು ಸಂಸ್ಥೆಯ ಸಿಬ್ಬಂದಿಗಳು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 