ಭ್ರಷ್ಟಾಚಾರ ವಿರುದ್ಧ ಜಾಗೃತಿ ಕಾರ್ಯಕ್ರಮ.
Awareness program against corruption
ಕಾರವಾರ 13:- ವಿಚಕ್ಷಣ ಜಾಗೃತಿ ಸಪ್ತಾಹ ಸಲುವಾಗಿ ಎನ್.ಪಿ.ಸಿ.ಐ.ಎಲ್ ಕೈಗಾ ವತಿಯಿಂದ ಕಾರವಾರದ ಸಿದ್ದರ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸೊಸೈಟಿ ಅಡಿಯಲ್ಲಿ ಬರುವ ಪ್ರೌಢಶಾಲೆ, ಪುರುಷ ಮತ್ತು ಮಹಿಳಾ ಕಾಲೇಜು, ಐ.ಟಿ.ಐ ಸಮೂಹದ ಆವರಣದಲ್ಲಿ ಗುರುವಾರ ಭ್ರಷ್ಟಾಚಾರ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿ, ರಾಜನ ಭಾವಿ ಎಂಬ ನಾಟಕವನ್ನು ರಂಗತರಂಗ ತಂಡದ ಮೂಲಕ ಪ್ರಸ್ತುತ ಪಡಿಸಲಾಯಿತು. ಎನ್.ಪಿ.ಸಿ.ಐ.ಎಲ್ ಕೈಗಾದ ಸ್ಥಾನಿಯ ನಿರ್ದೇಶಕ ಬಿ. ವಿನೋದ ಕುಮಾರ್ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ವಿಜಿಲೆನ್ಸ್ ಅಧಿಕಾರಿ ಮುಕೇಶ್, ವಿಶ್ವೇಶ್ವರ ಗೋವನ್ಕರ ಕೆ, ವೇಣುಗೋಪಾಲ್ ಹಾಗೂ ವನಿತಾ ಪ್ರಭಾಕರ್ ರಾಣೇ, ಪರಶುರಾಮ್ ರಾಣೆ, ರಾಜೇಂದ್ರ ರಾಣೆ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಅಧ್ಯಕ್ಷರು ಮತ್ತು ಗ್ರಾಮದ ಜನತೆ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 