ಗದಗದ ಕೆ.ಹೆಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜಾಗೃತಿ ಕಾರ್ಯಕ್ರಮ
Awareness program at K.H. Patil Medical Sciences College, Gadag
ಲೋಕದರ್ಶನ ವರದಿ
ಗದಗ, ಜು. 23: ಕೆ.ಹೆಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕ್ಲಿನಿಕ್ ವತಿಯಿಂದ ಜುಲೈ 22ರಂದು ವಿಶ್ವ ಮೆದುಳು ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಜಿ.ಎಸ್. ಪಲ್ಲೇದ, ವೈದ್ಯಕೀಯ ಅಧೀಕ್ಷಕ ಡಾ. ವಿನಾಯಕ ಪಂಚಗಾರ, ಎಲುಬು ಮತ್ತು ಕೀಲು ವಿಭಾಗದ ಮುಖ್ಯಸ್ಥ ಡಾ. ಮಹಾಂತೇಶ ಪಾಟೀಲ, ವೈದ್ಯಕೀಯ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಂಗಮೇಶ್ ಅಸೂಟಿ ಹಾಗೂ ಕ್ಷಯರೋಗ ವಿಭಾಗದ ಮುಖ್ಯಸ್ಥ ಡಾ. ಅರುಣಕುಮಾರ ಉದ್ಘಾಟಿಸಿದರು.
ಡಾ. ಜಿ.ಎಸ್. ಪಲ್ಲೇದ ಮಾತನಾಡಿ, ಪ್ರತಿವರ್ಷ ಜುಲೈ 22ರಂದು ವಿಶ್ವ ಮೆದುಳು ದಿನಾಚರಣೆಯನ್ನು ಆಚರಿಸುವ ಮೂಲಕ ಮೆದುಳಿನ ಆರೋಗ್ಯ ಮತ್ತು ನರರೋಗಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿದಿನ 7ಹಿ8 ಗಂಟೆಗಳ ನಿದ್ರೆ, ನಿಯಮಿತ ವ್ಯಾಯಾಮ, ವಾಹನ ಚಲಾಯಿಸುವಾಗ ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸುವುದು, ಒತ್ತಡ ನಿಯಂತ್ರಣಕ್ಕೆ ಯೋಗ ಮತ್ತು ಧ್ಯಾನ ಮಾಡುವುದು ಹಾಗೂ ಅಗತ್ಯವಿದ್ದಾಗ ವೈದ್ಯರ ಸಲಹೆ ಪಡೆಯುವುದು ಅತ್ಯಗತ್ಯ ಎಂದು ತಿಳಿಸಿದರು.
ಎನ್ಸಿಡಿ ವೈದ್ಯಾಧಿಕಾರಿ ಡಾ. ಅರ್ಿತಾ ಮಾತನಾಡಿ, ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವುದರಿಂದ ಅಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದು. ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಸಿಬ್ಬಂದಿ, ಜಿಲ್ಲಾ ಕುಷ್ಠರೋಗ ವಿಭಾಗದ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನಾ ಸಿ. ಚವ್ಹಾಣ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಸಂಯೋಜಕ ಪ್ರವೀಣ ಎಸ್. ರೋಣ ವಂದಿಸಿದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 