ವಕ್ಕುಂದ ಗ್ರಾಮದಲ್ಲಿ ಪೀಡೆನಾಶಕಗಳ ಸುರಕ್ಷತೆ ಕುರಿತು ಜಾಗ್ರತಿ ಕಾರ್ಯಕ್ರಮ
Awareness program on pesticide safety in Vakkunda village
ಬೈಲಹೊಂಗಲ 24 : ತಾಲೂಕಿನ ವಕ್ಕುಂದ ಗ್ರಾಮದಲ್ಲಿ ಶುಕ್ರವಾರದಂದು ಕೃಷಿ ಇಲಾಖೆ ಬೈಲಹೊಂಗಲ ವತಿಯಿಂದ ಸಂಗತಿಕೊಪ್ಪ ಬಸವೇಶ್ವರ ದೇವಸ್ಥಾನದಲ್ಲಿ ಕೃಷಿಯಲ್ಲಿ ಪೀಡೆನಾಶಕಗಳ ಸುರಕ್ಷಿತ ಮತ್ತು ವಿವೇಚನಾತ್ಮಕ ಬಳಕೆ ಕುರಿತು ರೈತರಿಗೆ ಜಾಗೃತಿ ಕಾರ್ಯಕ್ರಮ ಜರುಗಿತು.
ಇವತ್ತಿನ ಆಧುನಿಕ ಜಗತ್ತಿನಲ್ಲಿ ಕೃಷಿ ಭೂಮಿಯನ್ನು ಆರೋಗ್ಯದಿಂದ ಇಡಲು ರಾಸಾಯನಿಕ ಗೊಬ್ಬರ ಮತ್ತು ಪಿಡೆನಾಶಕಗಳ ಬಳಕೆ ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡಿ ವಿಷಮುಕ್ತ ಆಹಾರ ಉತ್ಪಾದನೆ ಮಾಡಲು ಕೃಷಿ ಅಧಿಕಾರಿ ಯಮನಪ್ಪ ಆರ್ ಎಂ ರೈತರಿಗೆ ಮನವಿ ಮಾಡಿದರು. ಕೃಷಿ ಕಾಯಕದಲ್ಲಿ ರೈತರು ಸುರಕ್ಷಿತವಾಗಿ ರಾಸಾಯನಿಕ ವಸ್ತುಗಳನ್ನು ಬಳಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕಿಟಶಾಸ್ತ್ರಜ್ಞ.
ಕೆ.ಎಲ್. ಈ ಕೃಷಿ ಮಹಾವಿದ್ಯಾಲಯದ ಡಾ. ನಿಂಗರಾಜ ಬೆಳಗಲ್ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಊರಿನ ಹಿರಿಯರಾದ ಅಶೋಕ ಪಾಟೀಲ, ಅಶೋಕ ಜಂತಿ ವಹಿಸಿದ್ದರು ಮತ್ತು ಇಲಾಖೆಯ ಜಾಗೃತಿ ಕಾರ್ಯಕ್ರಮದ ಕುರಿತು ಹರ್ಷ ವ್ಯಕ್ತಪಡಿಸಿದರು.
ಹಾಗೆಯೇ ಶಿಕ್ಷಣ ಪ್ರೇಮಿಗಳು, ಸಮಾಜ ಸೇವಕರು ಹಾಗೂ ಉದ್ಯಮಿಗಳು ಆದ ನಾರಾಯಣ ನಲವಡೆ ಅವರು ಕಾರ್ಯಕ್ರಮದಲ್ಲಿ ರೈತರಿಗೆ ಪ್ರಸ್ತುತ ಕೃಷಿಯಲ್ಲಿ ರೈತರು ಅನುಸರಿಸ ಬೇಕಾದ ವಿವಿಧ ರೀತಿಯ ಕೆಲಸಗಳ ಬಗ್ಗೆ ವಿವರಿಸಿ ಇಲಾಖೆಯ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೋರ್ಟಿವ ಕಂಪನಿ ಪ್ರತಿನಿಧಿಗಳು, ಕೃಷಿ ಅಧಿಕಾರಿ ಬಿ. ಕೆ ಜಮಾದಾರ, ಗಂಗಾಧರ, ಬಸವರಾಜ, ಚಂದ್ರಕಾಂತ ಮರಡಿ ನಿರೂಪಿಸಿ ವಂದಿಸಿದರು.
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ 