ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ: ವಿಚಾರಣೆ 2019ರ ಮೊದಲ ವಾರಕ್ಕೆ ಮುಂದೂಡಿದ ಸುಪ್ರೀಂ
ನವದೆಹಲಿ 29: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರದೇಶವನ್ನು ಮೂರು ಭಾಗಗಳಾಗಿ ವಿಭಾಗಿಸಿ ಹಂಚುವ ಅಲಹಾಬಾದ್ ಹೈಕೋರ್ಟ್ನ 2010ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಜನವರಿ 2019ರ ಮೊದಲ ವಾರಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಕೆ.ಎಂ. ಜೋಸೆಫ್ ಅವರನ್ನೊಳಗೊಂಡ ನೂತನ ಪೀಠ ವಿಚಾರಣೆ ನಡೆಸಿ ಪ್ರಕರಣವನ್ನು ಮುಂದೂಡಿದೆ.
'ಮಸೀದಿ ಇಸ್ಲಾಂನ ಅವಿಭಾಜ್ಯ ಭಾಗವಲ್ಲ' ಎಂಬ 1994ರ ತೀರ್ಪನ್ನು ಪಂಚಪೀಠಕ್ಕೆ ವಹಿಸಬೇಕೆಂಬ ಮನವಿಯನ್ನು ಸೆಪ್ಟೆಂಬರ್ 27ರಂದು ತಳ್ಳಿ ಹಾಕಿದ್ದ ಸುಪ್ರೀಂಕೋರ್ಟ್, ಅಯೋಧ್ಯೆಯ ಜಾಗದ ವಿವಾದದ ವಿಚಾರಣೆಗೆ ಹಾದಿ ಸುಗಮಗೊಳಿಸಿತ್ತು. ಮತ್ತು ಅಯೋಧ್ಯೆಯ ಜಾಗದ ಕುರಿತಾದ ಸಿವಿಲ್ ದಾವೆಯ ವಿಚಾರಣೆಯನ್ನು ತ್ರಿಸದಸ್ಯ ಪೀಠ ಅಕ್ಟೋಬರ್ 29ರಂದು ಇಂದಿನಿಂದ ಕೈಗೆತ್ತಿಕೊಳ್ಳಲಿದೆ ಎಂದು ಹೇಳಿತ್ತು. ಆದರೆ ಇಂದು ಸುಪ್ರೀಂ ಕೋರ್ಟ್ ವಿಚಾರಣೆಯನ್ನು 2019ರ ಜನವರಿ ತಿಂಗಳಿಗೆ ಮುಂದೂಡಿದೆ
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 