ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ: ವಿಚಾರಣೆ 2019ರ ಮೊದಲ ವಾರಕ್ಕೆ ಮುಂದೂಡಿದ ಸುಪ್ರೀಂ
ನವದೆಹಲಿ 29: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರದೇಶವನ್ನು ಮೂರು ಭಾಗಗಳಾಗಿ ವಿಭಾಗಿಸಿ ಹಂಚುವ ಅಲಹಾಬಾದ್ ಹೈಕೋರ್ಟ್ನ 2010ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಜನವರಿ 2019ರ ಮೊದಲ ವಾರಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಕೆ.ಎಂ. ಜೋಸೆಫ್ ಅವರನ್ನೊಳಗೊಂಡ ನೂತನ ಪೀಠ ವಿಚಾರಣೆ ನಡೆಸಿ ಪ್ರಕರಣವನ್ನು ಮುಂದೂಡಿದೆ.
'ಮಸೀದಿ ಇಸ್ಲಾಂನ ಅವಿಭಾಜ್ಯ ಭಾಗವಲ್ಲ' ಎಂಬ 1994ರ ತೀರ್ಪನ್ನು ಪಂಚಪೀಠಕ್ಕೆ ವಹಿಸಬೇಕೆಂಬ ಮನವಿಯನ್ನು ಸೆಪ್ಟೆಂಬರ್ 27ರಂದು ತಳ್ಳಿ ಹಾಕಿದ್ದ ಸುಪ್ರೀಂಕೋರ್ಟ್, ಅಯೋಧ್ಯೆಯ ಜಾಗದ ವಿವಾದದ ವಿಚಾರಣೆಗೆ ಹಾದಿ ಸುಗಮಗೊಳಿಸಿತ್ತು. ಮತ್ತು ಅಯೋಧ್ಯೆಯ ಜಾಗದ ಕುರಿತಾದ ಸಿವಿಲ್ ದಾವೆಯ ವಿಚಾರಣೆಯನ್ನು ತ್ರಿಸದಸ್ಯ ಪೀಠ ಅಕ್ಟೋಬರ್ 29ರಂದು ಇಂದಿನಿಂದ ಕೈಗೆತ್ತಿಕೊಳ್ಳಲಿದೆ ಎಂದು ಹೇಳಿತ್ತು. ಆದರೆ ಇಂದು ಸುಪ್ರೀಂ ಕೋರ್ಟ್ ವಿಚಾರಣೆಯನ್ನು 2019ರ ಜನವರಿ ತಿಂಗಳಿಗೆ ಮುಂದೂಡಿದೆ
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 