ಅಯೋಧ್ಯೆ ವಿವಾದ: ಸಿಜೆಐ ರಂಜನ್ ಗೊಗೊಯ್ ವಿದೇಶ ಪ್ರವಾಸ ರದ್ದು
ನವದೆಹಲಿ, ಅ 17: ಅಯೋಧ್ಯೆ ವಿವಾದ ಕುರಿತ ಅಂತಿಮ ತೀಪು ಪ್ರಕಟಿಸಿದ ನಂತರ ಎದುರಾಗುವ ಸಂಕಷ್ಟ, ಭಿನ್ನಾಭಿಪ್ರಾಯಗಳ ಕುರಿತು ಚರ್ಚಿಸಲು ಸುಪ್ರೀಂಕೋರ್ಟ್ನ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಈ ತಿಂಗಳು ಕೈಗೊಳ್ಳಬೇಕಾಗಿದ್ದ ತಮ್ಮ ವಿದೇಶ ಪ್ರವಾಸ ರದ್ದುಪಡಿಸಿದ್ದಾರೆ. ಅವರು, ಈ ತಿಂಗಳ 18 ರಂದು ದುಬೈಗೆ ತೆರಳಿ ಅಲ್ಲಿಂದ ಕೈರೋ, ಬ್ರೆಜಿಲ್ ಮತ್ತು ನ್ಯೂಯಾರ್ಕ್ನ್ಲ್ಲಿ ನಡೆಯುವ ವಿವಿಧ ಸಮಾರಂಭಗಳಲ್ಲಿ ಭಾಗವಹಿಸಿ, ಇದೇ 31ರಂದು ಸ್ವದೇಶಕ್ಕೆ ಹಿಂದಿರುಗುವ ಕಾರ್ಯಕ್ರಮ ನಿಗದಿಯಾಗಿತ್ತು. ಅಯೋಧ್ಯೆ ಪ್ರಕರಣ ಇತ್ಯರ್ಥಪಡಿಸುವ ಪ್ರಕ್ರಿಯೆಯ ಭಾಗವಾಗಿ ಅವರು ತಮ್ಮ ವಿದೇಶ ಭೇಟಿಯನ್ನು ರದ್ದುಪಡಿಸಿದ್ದಾರೆ ಎಂದು ವರದಿಯಾಗಿದೆ. ಅಯೋಧ್ಯ- ರಾಮಜನ್ಮಭೂಮಿ ವಿವಾದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸುಪ್ರೀಂಕೋರ್ಟ್ನ್ ಸಂವಿಧಾನ ಪೀಠದ ನೇತೃತ್ವವನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಹಿಸಿದ್ದಾರೆ. 40 ದಿನಗಳ ಕಾಲ ನಿತ್ಯ ನಡೆದ ವಿಚಾರಣೆಯ ನಂತರ ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿದೆ. ನವಂಬರ್ 17 ರಂದು ಗೊಗೊಯ್ ಅವರು ಸೇವಾ ನಿವೃತ್ತಿಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 4 ರಿಂದ15ರ ನಡುವೆ ತೀಪು ಪ್ರಕಟಿಸುವ ನಿರೀಕ್ಷೆಯಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 