ಅಯೋಧ್ಯೆ ವಿವಾದ: ಸಿಜೆಐ ರಂಜನ್ ಗೊಗೊಯ್ ವಿದೇಶ ಪ್ರವಾಸ ರದ್ದು
ನವದೆಹಲಿ, ಅ 17: ಅಯೋಧ್ಯೆ ವಿವಾದ ಕುರಿತ ಅಂತಿಮ ತೀಪು ಪ್ರಕಟಿಸಿದ ನಂತರ ಎದುರಾಗುವ ಸಂಕಷ್ಟ, ಭಿನ್ನಾಭಿಪ್ರಾಯಗಳ ಕುರಿತು ಚರ್ಚಿಸಲು ಸುಪ್ರೀಂಕೋರ್ಟ್ನ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಈ ತಿಂಗಳು ಕೈಗೊಳ್ಳಬೇಕಾಗಿದ್ದ ತಮ್ಮ ವಿದೇಶ ಪ್ರವಾಸ ರದ್ದುಪಡಿಸಿದ್ದಾರೆ. ಅವರು, ಈ ತಿಂಗಳ 18 ರಂದು ದುಬೈಗೆ ತೆರಳಿ ಅಲ್ಲಿಂದ ಕೈರೋ, ಬ್ರೆಜಿಲ್ ಮತ್ತು ನ್ಯೂಯಾರ್ಕ್ನ್ಲ್ಲಿ ನಡೆಯುವ ವಿವಿಧ ಸಮಾರಂಭಗಳಲ್ಲಿ ಭಾಗವಹಿಸಿ, ಇದೇ 31ರಂದು ಸ್ವದೇಶಕ್ಕೆ ಹಿಂದಿರುಗುವ ಕಾರ್ಯಕ್ರಮ ನಿಗದಿಯಾಗಿತ್ತು. ಅಯೋಧ್ಯೆ ಪ್ರಕರಣ ಇತ್ಯರ್ಥಪಡಿಸುವ ಪ್ರಕ್ರಿಯೆಯ ಭಾಗವಾಗಿ ಅವರು ತಮ್ಮ ವಿದೇಶ ಭೇಟಿಯನ್ನು ರದ್ದುಪಡಿಸಿದ್ದಾರೆ ಎಂದು ವರದಿಯಾಗಿದೆ. ಅಯೋಧ್ಯ- ರಾಮಜನ್ಮಭೂಮಿ ವಿವಾದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸುಪ್ರೀಂಕೋರ್ಟ್ನ್ ಸಂವಿಧಾನ ಪೀಠದ ನೇತೃತ್ವವನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಹಿಸಿದ್ದಾರೆ. 40 ದಿನಗಳ ಕಾಲ ನಿತ್ಯ ನಡೆದ ವಿಚಾರಣೆಯ ನಂತರ ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿದೆ. ನವಂಬರ್ 17 ರಂದು ಗೊಗೊಯ್ ಅವರು ಸೇವಾ ನಿವೃತ್ತಿಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 4 ರಿಂದ15ರ ನಡುವೆ ತೀಪು ಪ್ರಕಟಿಸುವ ನಿರೀಕ್ಷೆಯಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 