ಕೊರೋನಾ ನಿಯಂತ್ರಣಕ್ಕೆ ಆಯುಷ್, ಆರೋಗ್ಯ ಸಚಿವಾಲಯ ಸಾಥ್ : ಶ್ರೀಪಾದನಾಯಕ್
ನವದೆಹಲಿ, ಮಾ 20, ದೇಶದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಆಯುರ್ವೇದ, ಯೋಗ, ನ್ಯಾಚುರೋಪತಿ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿ ಸಚಿವಾಲಯವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಹಕರಿಸುತ್ತಿದೆ ಎಂದು ಲೋಕಸಭೆಗೆ ಸರ್ಕಾರ ಶುಕ್ರವಾರ ತಿಳಿಸಿದೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ, ನಲಮಡ ಉತ್ತಮ್ ಕುಮಾರ್ ರೆಡ್ಡಿ, ಮಾರಕ ಕೊರೋನಾ ವೈರಸ್ ಸೋಂಕು ನಿವಾರಣೆಗೆ ಯಾವುದೇ ಚುಚ್ಚುಮದ್ದು ಅಥವಾ ಔಷಧಿ ಸದ್ಯ ಲಭ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ ಎಂದರು.ತೃಣಮೂಲ ಕಾಂಗ್ರೆಸ್ ಸದಸ್ಯ ಶತಾಬ್ದಿ ರೈ ಮಾತನಾಡಿ, ಹಲವು ಸಚಿವರು ಹಾಗೂ ಸಂಸದರು ಕೊರೋನಾ ನಿವಾರಣೆಗೆ ಗೋಮೂತ್ರ ಮದ್ದು ಎನ್ನುತ್ತಿದ್ದಾರಲ್ಲ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವ ಶ್ರೀಪಾದ್ ಯಸ್ಸೋ ನಾಯಕ್, ಕೊರೋನಾ ವೈರಾಣು ನಿಯಂತ್ರಣಕ್ಕೆಂದೇ ಯಾವುದೇ ನಿಗದಿತಚುಚ್ಚುಮದ್ದು ಅಥವಾ ಔಷಧ ಸದ್ಯಕ್ಕೆ ಲಭ್ಯವಿಲ್ಲ. ಆದಾಗ್ಯೂ, ಆಯುರ್ವೇದ, ಯುನಾನಿ, ಹೋಮಿಯೋಪಥಿ ಮೊದಲಾದ ಹಳೆಯ ಔಷಧ ಪದ್ಧತಿಯಿಂದ ಉಸಿರಾಟದ ವ್ಯವಸ್ಥೆ ಉತ್ತಮಗೊಳ್ಳುತ್ತಿರುವುದಂತೂ ಸತ್ಯ. ಕೊರೋನಾ ನಿಯಂತ್ರಿಸಲು ಆಯುಷ್ ಸಚಿವಾಲಯವೂ ಸಾಥ್ ಸಹಕರಿಸುತ್ತಿದೆ ಎಂದು ಹೇಳಿದರು. ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್ ಮಾತನಾಡಿ, ದೇಶದಲ್ಲಿ ಕೊರೋನಾ ವೈರಸ್ ದೃಢೀಕರಣ ಪರೀಕ್ಷೆ ವೈಜ್ಞಾನಿಯಕ ರೀತಿಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 