ಜುಗೂಳದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಚಾಲನೆ : ಉಮೇಶ ಪಾಟೀಲ
Ayushman Health Center inaugurated in Jugula: Umesh Patil
ಕಾಗವಾಡ 13 : ಶಾಸಕ ರಾಜು ಕಾಗೆ, ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಇವರ ವಿಶೇಷ ಪ್ರಯತ್ನದಿಂದ ಜುಗೂಳ ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆಯ ಗ್ರಾಮಸ್ಥರು ಬಹುದಿನಗಳ ಬೇಡಿಕೆ ಈಗ ಈಡೇರಿದ್ದು, ರೂ. 65 ಲಕ್ಷ ಶಾಸಕರ ಅನುದಾನಲ್ಲಿ ನೂತನ ಆಯುಷ್ಮಾನ್ ಆರೋಗ್ಯ ಮಂದಿರ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ ಎಂದು ಕಾಗವಾಡ ಯುವ ಕಾಂಗ್ರೆಸ್ ಅಧ್ಯಕ್ಷ ಉಮೇಶ ಪಾಟೀಲ ತಿಳಿಸಿದ್ದಾರೆ.
ಅವರು ಶನಿವಾರ ದಿ. 13 ರಂದು ತಾಲೂಕಿನ ಜುಗೂಳ ಗ್ರಾಮದಲ್ಲಿ ಮಾತನಾಡುತ್ತಿದ್ದರು. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿರುವ ಶಾಸಕರು, ಜುಗೂಳ ಗ್ರಾಮದ ಅಭಿವೃದ್ಧಿಗೆ ಅನುದಾನದ ಹೊಳೆಯನ್ನೇ ಹರಿಸಿದ್ದಾರೆ. ಆಯುಷ್ಮಾನ್ ಆರೋಗ್ಯ ಮಂದಿರ ನಿರ್ಮಿಸುವ ಮೂಲಕ ಈಗ ಗ್ರಾಮಸ್ಥರ ಬಹುದಿನಗಳ ಕನಸನ್ನು ಈಡೇರಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿಪರ ಮತ್ತು ಜನಪರ ಕಾರ್ಯಗಳಿಂದಾಗಿ 2028 ರ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.
ಈ ಸಮಯದಲ್ಲಿ ಮಾಜಿ ಗ್ರಾ.ಪಂ. ಅಧ್ಯಕ್ಷ ಕಾಕಾಸಾಬ ಪಾಟೀಲ, ಅನಿಲ ಕರೋಲೆ, ಅಕ್ಷಯ ಪಾಟೀಲ, ಅಮೀನ ನಂದಗಾವೆ, ಬಸವರಾಜ ನಂದಾಳೆ, ಮಹಾದೇವ ಕಾಂಬಳೆ, ಚಿದಾನಂದ ತಾರದಾಳೆ, ಸುರೇಶ ಪಾಟೀಲ, ದಯಾನಂದ ಮಿನಚೆ, ಶಿವಾನಂದ ಅಮ್ಮಣಗೆ, ಬಿಂದು ಅಧೋಕೆ, ಫಾರೂಖ ಕಳಾವಂತ, ಗುತ್ತಿಗೆದಾರ ವಿಜಯ ಚಿಂಚಲೆ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 