ಅಯ್ಯನಗೌಡ್ರ ವಯೋ ಸೇವಾ ನಿವೃತ್ತಿ: ಬೀಳ್ಕೊಡುಗೆ ಸಮಾರಂಭ
Ayyanagoudra's retirement from service: Farewell ceremony
ರಾಣಿಬೆನ್ನೂರ 02 : ತಾಲೂಕಿನ ಸುಣಕಲ್ಲಬಿದರಿ ಅರಳಿ ಸಿದ್ದಲಿಂಗಪ್ಪ ಬಸಪ್ಪ ಸರಕಾರಿ ಪ್ರಥಮ ದರ್ಜೆ ಕಾಲೇಜ್ನಲ್ಲಿ ಶನಿವಾರ ಪ್ರಾಚಾರ್ಯ ಆರ್.ಎಫ್. ಅಯ್ಯನಗೌಡ್ರ ಅವರು ಸೇವೆಯಿಂದ ವಯೋ ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಾಲೇಜ್ ಶಿಕ್ಷಣ ಇಲಾಖೆಯಲ್ಲಿ ಸುಮಾರು 34 ವರ್ಷ ಸೇವೆ ಸಲ್ಲಿಸಿದ ಪ್ರಾಚಾರ್ಯ ಅಯ್ಯನಗೌಡ್ರ ಅವರು ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವರ ಸೇವಾ ಅವಧಿಯಲ್ಲಿ ಕಾಲೇಜ್ ಬಹಳಷ್ಟು ಪ್ರಗತಿಯನ್ನು ಹೊಂದಲು ಸಾಧ್ಯವಾಗಿದೆ. ಇಂತಹ ವ್ಯಕ್ತಿಗಳ ಸೇವೆ ಅಮೂಲ್ಯವಾಗಿದ್ದು, ನಿವೃತ್ತಿ ನಂತರ ಮಕ್ಕಳಿಗೆ ಮಾರ್ಗದರ್ಶನ ನೀಡಬೇಕು. ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಹಾರೈಯಿಸಿದರು.
ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ ಡಾ.ಎಸ್.ಟಿ.ಬಾಗಲಕೋಟಿ, ಕಾಲೇಜ್ ಅಭಿವೃದ್ಧಿ ಸದಸ್ಯ ಬಸವರಾಜ ಕಾರಗಿ, ಮಹದೇವಪ್ಪ ನಾರಜ್ಜಿ, ಚನ್ನಬಸಪ್ಪ ನಾಡಿಗೇರ, ಸಂತೋಷ ಹೆಡ್ಡನವರ, ಸಾಂಸ್ಕೃತಿಕ ವಿಭಾಗದ ಸಂಚಾಲಕ ಡಾ.ಎಸ್.ಪಿ.ಗೌಡರ, ಅಂಬಿಕಾ ಹೊಸಮನಿ, ಡಾ.ಬಸವರಾಜ ಹುಗ್ಗಿ, ಡಾ.ಹನುಮಂತರಾಜು ಎನ್.ಬಿ., ರವಿಕುಮಾರ, ಲೋಹಿಯಾ ಕೆಜಿಆರ್., ಹನುಮಂತರಾಜ ಎನ್.ಬಿ., ಡಾ.ರವಿ..ಎಂ., ಕಚೇರಿ ಅಧಿಕ್ಷಕ ಸತೀಶ ಎಂ. ಸೇರಿದಂತೆ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 