ಒಂದೇ ದಿನ ಮೂರು ಕೋಟಿ ಆದಾಯಗಳಿಸಿದ ಅಯ್ಯಪ್ಪ..!!
ಶಬರಿಮಲೆ, ನ 19 ಒಂದೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯ ಆದಾಯ ಮೂರು ಕೋಟಿರೂಪಾಯಿಗೆ ಏರಿಕೆಯಾಗಿದೆ. ಕಳೆದ ಶನಿವಾರ ಮಂಡಲ ಪೂಜೆಗಾಗಿ ದೇಗುಲದ ಬಾಗಿಲು ತೆರೆಯಲಾಗಿದ್ದು ಅದೇ ದಿನ ಹೆಚ್ಚಿನ ಭಕ್ತರು ಶಬರಿಮಲೆಗೆ ಆಗಮಿಸಿ ಸ್ವಾಮಿಯ ದರ್ಶನ ಪಡೆದಿದ್ದಾರೆ.ದೇವಾಲಯಕ್ಕೆ ಬರೋಬರಿ 3.30 ಕೋಟಿ ಹಣವನ್ನು ಭಕ್ತರು ಕಾಣಿಕೆಯಾಗಿ ಸಲ್ಲಿಸಿದ್ದಾರೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚಾಗಿದೆ. ಕಳೆದ ಬಾರಿ 2.04 ಕೋಟಿ ರೂ ಹಣ ಸಂಗ್ರಹವಾಗಿತ್ತು ಜೊತೆಗೆ ಕಳೆದ ವರ್ಷ ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶ ನಿಷೇಧಿಸಿ ಅಯ್ಯಪ್ಪ ಸ್ವಾಮಿ ಭಕ್ತರು ಪ್ರತಿಭಟನೆ ನಡೆಸಿದ್ದರು. ಇದೆ 16ರ ಸಂಜೆ 5.30ಕ್ಕೆ ಮಂಡಲ-ಮಕ್ಕವರ್ಿಲಕ್ಕು ಪೂಜೆಗಾಗಿ ಶಬರಿಮಲೆ ದೇವಾಲಯದ ಬಾಗಿಲು ತೆರೆಯಲಾಗಿದ್ದು ಈವರೆಗೆ 70 ಸಾವಿರಕ್ಕೂ ಹೆಚ್ಚು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಎನ್. ವಾಸು ಅವರ ಪ್ರಕಾರ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅಯ್ಯಪ್ಪಸ್ವಾಮಿ ದೇವಾಲಯದ ಆದಾಯ ಶೇ.50ರಷ್ಟು ಹೆಚ್ಚಾಗಿದೆ ಎಂದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 