ಅಯ್ಯಪ್ಪಸ್ವಾಮಿ, ದೇವಿ ಭಾವಚಿತ್ರ ಭವ್ಯ ಮೆರವಣಿಗೆ
ಲೋಕದರ್ಶನ ವರದಿ
ಬಾಗಲಕೋಟೆ 4: ನಗರದ ಬುಲರ್ಿ ಲೇಔಟ್ನಲ್ಲಿ ಶ್ರೀ ಬನ್ನಿಮಹಾಕಾಳಿ ದೇವಸ್ಥಾನದ ಕಾತರ್ಿಕೋತ್ಸವ ಹಾಗೂ ಅಯ್ಯಪ್ಪಸ್ವಾಮಿ ಮಹಾಪೂಜೆ ಅಂಗವಾಗಿ ಅಯ್ಯಪ್ಪಸ್ವಾಮಿ ಹಾಗೂ ದೇವಿ ಭಾವಚಿತ್ರ ಭವ್ಯ ಮೆರವಣಿಗೆ ಜರುಗಿತು.
ದೇವಸ್ಥಾನದಿಂದ ಆರಂಭವಾದ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಧ್ಯಾಹ್ನ ದೇವಸ್ಥಾನಕ್ಕೆ ತಲುಪಿತು. ಮೆರವಣಿಗೆ ಅಯ್ಯಪ್ಪಸ್ವಾಮಿ ಮತ್ತು ಬನ್ನಿ ಮಹಾಕಾಳಿ ದೇವಿಯ ಭಾವಚಿತ್ರ ಹೊತ್ತದ ಆನೆ, 108 ಮಹಿಳೆಯರು ಕುಂಭ ಹೊತ್ತು ಮೆರವಣಿಗೆಗೆ ಮೆರಗು ತಂದರು. ಇದಕ್ಕೂ ಮುನ್ನ ಬೆಳ್ಳಿಗ್ಗೆ ಬನ್ನಿ ಮಹಾಕಾಳಿ ದೇವಿಗೆ ವಿಶೇಷ ಅಭಿಷೇಕ, ಗೋಮಾತೆ ಹಾಗೂ ಅಯ್ಯಪ್ಪಸ್ವಾಮಿ ಪೂಜೆ ನೆರವೇರಿತು. ನಂತರ ಮಧ್ಯಾಹ್ನ ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಶ್ರೀಮಂತ ಬಸವಪ್ರಭು ಸರನಾಡಗೌಡ, ನಗರಸಭೆ ಮಾಜಿ ಸದಸ್ಯ ಬಸವರಾಜ ಕಟಗೇರಿ, ಆರ್ಎಸ್ಎಸ್ ನಗರ ಕಾರ್ಯವಾಹಕ ವಿಜಯ ಸುಲಾಖೆ, ಬಿಜೆಪಿ ನಗರ ಘಟಕ ಅಧ್ಯಕ್ಷ ರಾಜು ನಾಯ್ಕರ್ ಸೇರಿದಂತೆ ಅನೇಕ ಭಕ್ತರು, ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 