ಭ. ಮಹಾವೀರ ಜಯಂತಿ ಆಚರಣೆ

ಭ. ಮಹಾವೀರ ಜಯಂತಿ ಆಚರಣೆ  B. Mahavir Jayanti Celebration

ಲೋಕದರ್ಶನ ವರದಿ 

      ತಾಳಿಕೋಟಿ 30: ಪಟ್ಟಣದ ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ದಿ.30 ಸೋಮವಾರದಂದು  ಮಹಾವೀರ ಜಯಂತಿಯನ್ನು ಆಚರಣೆ ಮಾಡಲಾಯಿತು. ಸಂಸ್ಥೆಯ ಅಧ್ಯಕ್ಷ ಎಸ್‌.ಎಂ.ಸಜ್ಜನ ಅವರು ಮಹಾವೀರರು ಜೈನ ಧರ್ಮದ 24ನೇ ತೀರ್ಥಂಕರರಾಗಿದ್ದು, ಜೈನ ಧರ್ಮವನ್ನು ಪ್ರಚಾರ ಮಾಡಿ ಪ್ರಸಾರ ಮಾಡಿದ ಮಹಾನ್ ತತ್ವಜ್ಞಾನಿ ಮತ್ತು ಧರ್ಮಗುರು. ಅವರು ಅಹಿಂಸಾ ಮತ್ತು ಸತ್ಯದ ಮಹತ್ವವನ್ನು ಜಗತ್ತಿಗೆ ತಿಳಿಸಿದವರು. ಮಹಾವೀರರ ಸಾಧನೆಗಳು ಮಾನವಕುಲಕ್ಕೆ ಶಾಂತಿ, ಸತ್ಯ ಮತ್ತು ಅಹಿಂಸೆಯ ದಾರಿಯನ್ನು ತೋರಿಸಿವೆ. ಅವರ ತತ್ವಗಳು ಇಂದಿಗೂ ಪ್ರಪಂಚದ ನೈತಿಕ ಬದುಕಿಗೆ ಮಾರ್ಗದರ್ಶಕವಾಗಿವೆ ಎಂದು ತಿಳಿಸಿದರು.  ಸಂಸ್ಥೆಯ ಕಾರ್ಯದರ್ಶಿ ವಿವೇಕಾನಂದ ಸಜ್ಜನ, ಮುಖ್ಯಗುರುಗಳಾದ ಬಿ.ಜಿ.ಸಜ್ಜನ, ಆರ್‌.ಎಸ್‌.ದೇಸಾಯಿ, ದೈಹಿಕ ಶಿಕ್ಷಕ ಶಿವಾನಂದ ಸುಣಧೋಳಿ, ಸಿಬಿಎಸ್‌ಇ ಪ್ರಾಚಾರ್ಯ ಜಯಚಂದ್ರ, ಬಿಎಡ್ ಕಾಲೇಜ್ ಪ್ರಾಚಾರ್ಯ ಟಿ.ವ್ಹಿ ಶೆಟ್ಟಿ, ಜಿ.ಎನ್‌.ಪಾಟೀಲ, ಸರ್ವ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.