ಕಾರ್ಯಪಡೆ ರಚಿಸುವಂತೆ ಶಾಸಕ ಬಿ.ನಾಗೇಂದ್ರ ಅಧಿಕಾರಿಗಳಿಗೆ ಸೂಚನೆ
ಲೋಕದರ್ಶನವರದಿ
ಬಳ್ಳಾರಿ ಏ 11. ಕರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಗ್ರಾಮೀಣ ಕ್ಷೇತ್ರದ ಜನರ ತುತರ್ು ನೆರವಿಗಾಗಿ ಸಹಾಯವಾಣಿ ಆರಂಭಿಸುವುದರ ಜತೆಗೆ ಕಾರ್ಯಪಡೆ ರಚಿಸುವಂತೆ ಶಾಸಕ ಬಿ.ನಾಗೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ತಾಪಂ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ತಹಸೀಲ್ದಾರ, ತಾಪಂ ಇಒ, ಟಿಎಚ್ಒ, ಕೃಷಿ, ತೋಟಗಾರಿಕೆ, ಆಹಾರ, ಕುಡಿಯುವ ನೀರು ಸರಬರಾಜು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿರುವ ತಾಲೂಕು ಮಟ್ಟದ ಕಾರ್ಯಪಡೆ ರಚಿಸಬೇಕು. ಜಿಪಂ, ತಾಪಂ ಹಾಗೂ ಗ್ರಾಪಂ ಜನಪ್ರತಿನಿಧಿಗಳು ಈ ಕಾರ್ಯಪಡೆಯಲ್ಲಿರಬೇಕು. ಈ ಕಾರ್ಯಪಡೆ ಮೂಲಕ ಕ್ಷೇತ್ರದ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕೆಂದು ಹೇಳಿದರು.
ದಿನದ 24 ಗಂಟೆ ಕಾರ್ಯನಿರ್ವಹಿಸುವ ಸಹಾಯವಾಣಿ ಆರಂಭಿಸಬೇಕು. ಕೃಷಿ ಉತ್ಪನ್ನಗಳ ಸಾಗಣೆಗೆ ಸಮಸ್ಯೆಯಾದಾಗ ರೈತರು ಈ ಸಹಾಯವಾಣಿಗೆ ಕರೆ ಮಾಡಿದರೆ ಸ್ಪಂದಿಸಬೇಕು. ಕ್ಷೇತ್ರ ವ್ಯಾಪ್ತಿಯ ಜನರು ಹೆರಿಗೆ ಸೇರಿದಂತೆ ಆರೋಗ್ಯ ಸಮಸ್ಯೆಗಳಿಗೂ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ.
ಆಸ್ಪತ್ರೆಗೆ ದಾಖಲಿಸಲು ವಾಹನ ಸೌಲಭ್ಯ ಕಲ್ಪಿಸಲಾಗುವುದು ಎಂದು ಶಾಸಕ ಬಿ.ನಾಗೇಂದ್ರ ತಿಳಿಸಿದರು.ತಾಪಂ ಇಒ ಎಂ.ಬಸಪ್ಪ ಮಾತನಾಡಿ, ಸೋಮವಾರದಿಂದ ಸಹಾಯವಾಣಿ ಕಾಯರ್ಾರಂಭ ಮಾಡಲಿದೆ.
ಕೊರೊನಾ ವಿಚಾರ ಹಾಗೂ ಅಗತ್ಯ ಸೇವೆಗಳಿಗಾಗಿ ಜನರು ಕರೆ ಮಾಡಬಹುದು ಎಂದು ತಿಳಿಸಿದರು. ತಹಸೀಲ್ದಾರ್ ಯು.ನಾಗರಾಜ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 