ಎಲ್ಲ ಗ್ರಾಮಗಳ ರೈತರ ಸಮಸ್ಯೆಯನ್ನು ಆಲಿಸುತ್ತಿರುವ ಬಿ.ಟಿ ಚಂದ್ರಶೇಖರ್
B.T. Chandrashekhar listening to the problems of farmers from all the villages
ಲಕ್ಷ್ಮೇಶ್ವರ " 25 : ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಎಲ್ಲ ಗ್ರಾಮಗಳಿಗೆ ಭೇಟಿ ನೀಡುತ್ತಿರುವ ರಾಜ್ಯ ರೈತೋದಯ ಹಸಿರು ಸೇನೆಯ ರಾಜ್ಯಾಧ್ಯಕ್ಷರು ಹಾಗೂ 1008 ಬಡ ರೈತರ ಕಲ್ಯಾಣೋತ್ಸವ ನೆರವೇರಿಸಿದ ಕಲ್ಯಾಣ ಪುರುಷ ಬಿ.ಟಿ ಚಂದ್ರಶೇಖರ್ ಅವರು ಬುಧವಾರ ಶಿರಹಟ್ಟಿ ತಾಲೂಕಿನ ಛಬ್ಬಿ ವರವಿ ಗ್ರಾಮದ ಎಲ್ಲ ರೈತರೊಂದಿಗೆ ಸಭೆ ಸೇರಿ ಗ್ರಾಮದಲ್ಲಿರುವ ಮೂಲಭೂತ ಸೌಲಭ್ಯ ರೈತರು ಜಮೀನುಗಳಿಗೆ ತೆರಳುವ ರಸ್ತೆ ದನಕರಗಳಿಗೆ ಕುಡಿಯುವ ನೀರು ಸೇರಿದಂತೆ ಹಲವಾರು ಸಮಸ್ಯೆಗಳನ್ನು ರೈತರೊಂದಿಗೆ ಸಭೆ ನಡೆಸಿ ವಿಷಯ ಪಡೆದುಕೊಂಡರು. ಈ ಸಮಯದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಬಿ.ಟಿ ಚಂದ್ರಶೇಖರ್ ಅವರು ಎಲ್ಲಾ ರೈತರೊಂದಿಗೆ ನಾನು ಸದಾ ಇರುತ್ತೇನೆ ಶಿರಹಟ್ಟಿ ತಾಲೂಕಿನಲ್ಲಿರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಹಂತ ಹಂತವಾಗಿ ಪ್ರಯತ್ನಿಸುತ್ತೇನೆ. ನಿಮ್ಮೆಲ್ಲರ ಸಹಕಾರ ಅತಿ ಅವಶ್ಯಕವಾಗಿದೆ ಎಂದರು ಇದಕ್ಕೆ ಗ್ರಾಮಸ್ಥರು ಸಹ ನಿಮ್ಮ ಹೋರಾಟಕ್ಕೆ ನಮ್ಮ ಸಹಕಾರ ನಿರಂತವಾಗಿ ಇರುತ್ತದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು ಈ ಸಮಯದಲ್ಲಿ ರಾಜ್ಯ ರೈತೋದಯ ಹಸಿರು ಸೇನೆ ಸಂಘದ ಮಹಿಳಾ ಪದಾಧಿಕಾರಿಗಳು ರೈತ ಮುಖಂಡರು ಇದ್ದರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 