3.18 ಕೋಟಿ ರೂ ದೇಣಿಗೆ ನೀಡಿದ ಬಿಬಿಎಂಪಿ
ಬೆಂಗಳೂರು: ಭಾರಿ ಮಳೆಯಿಂದಾಗಿ ಕೊಡಗು ಹಾಗೂ ಕೇರಳದಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಗೆ ಬಿಬಿಎಂಪಿ ವತಿಯಿಂದ 3.18 ಕೋಟಿ ರು. ಚೆಕ್ ಹಾಗೂ ಸಿದ್ದಾರ್ಥ ಶಿಕ್ಷಣ ಸಂಸ್ಥೆ ವತಿಯಿಂದ ನಾಲ್ಕು ಟ್ರಕ್ಗಳ ಆಹಾರ ಪದಾರ್ಥ, ಇತರೆ ಪರಿಕರಗಳನ್ನು ದೇಣಿಗೆ ನೀಡಲಾಗಿದೆ.
ಸದಾಶಿವನಗರ ಬಿಡಿಎ ಕ್ವಾಟ್ರಸ್ನಲ್ಲಿ ಸೋಮವಾರ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್ ಅವರು ಚೆಕ್ ವಿತರಿಸಿ, ಟ್ರಕ್ಗಳಿಗೆ ಚಾಲನೆ ನೀಡಿದರು. ಇದಕ್ಕೂ ಮುನ್ನ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೊಡಗಿನಲ್ಲಿ ಉಂಟಾಗಿರುವ ಭಾರಿ ಮಳೆಯಿಂದ ಅಲ್ಲಿನವರ ಜನಜೀವನ ಅಸ್ವಸ್ಥವಾಗಿದೆ. ಅವರ ನೆರವಿಗೆ ಬಿಬಿಎಂಪಿ ಧಾವಿಸಿದೆ. ಒಟ್ಟು 3.18 ಕೋಟಿ ರು. ನೆರವು ನೀಡಲಾಗಿದ್ದು, ಇದರಲ್ಲಿ 1 ಕೋಟಿ ರು. ಕೇರಳ ರಾಜ್ಯಕ್ಕೆ ಕಳುಹಿಸಲಾಗುತ್ತಿದೆ. ಉಳಿದ ಹಣವನ್ನು ಮುಖ್ಯಮಂತ್ರಿ ಅವರ ನಿಧಿಗೆ ಹಾಕಲಾಗಿದೆ ಎಂದರು.
ಅಷ್ಟೆ ಅಲ್ಲದೆ, ಬಿಬಿಎಂಪಿ ಸದಸ್ಯರ ಒಂದು ತಿಂಗಳ ಸಂಬಳ, ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಪಾಲಿಕೆ ನೌಕರರ ಒಂದು ದಿನದ ಸಂಬಳವನ್ನು ನೆರೆ ಸಂತ್ರಸ್ತರಿಗೆ ನೀಡಲಾಗುತ್ತಿದೆ. ಸಿದ್ದಾರ್ಥ ಶಿಕ್ಷಣ ಸಂಸ್ಥೆ ಹಾಗೂ ಬಿಬಿಎಂಪಿಯಿಂದ ತಲಾ ಎರಡು ಟ್ರಕ್ ಬೆಡ್ಶೀಟ್, ನೀರು, ಬಿಸ್ಕತ್, ಬೇಳೆಕಾಳುಗಳು ಸೇರಿದಂತೆ ಇತರೆ ಸಾಮಾಗ್ರಿ ಹಾಗೂ ಪರಿಕರಗಳನ್ನು ಕಳುಹಿಸಿಕೊಡಲಾಗುತ್ತಿದೆ ಎಂದರು. ಜತೆಗೆ ಬಿಬಿಎಂಪಿಯಿಂದ 100 ಇ- ಶೌಚಾಲಯ ಹಾಗೂ 300 ಪೌರಕಾಮರ್ಿಕರನ್ನೂ ಕೊಡಗಿಗೆ ಕಳುಹಿಸಲಾಗಿದೆ. ನೀರು, ಒಳಚರಂಡಿ ಸಮಸ್ಯೆಗೆ ಬಿಡಬ್ಲ್ಯೂಎಸ್ಎಸ್ಬಿ ಯಿಂದ ಮಿಷನ್ಗಳು ಹಾಗೂ ಸಿಬ್ಬಂದಿಯನ್ನು ನೀಡಿದ್ದೇವೆ.
ಗುಡ್ಡ ಕುಸಿತದಿಂದ ಆ ಭಾಗದ ಜನ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅವರಿಗೆ ಒಂದೇ ದಿನದಲ್ಲಿ ಪ್ರೀ ಫ್ಯಾಬ್ರಿಕ್ ಮಾದರಿಯ ಮನೆ ನಿಮರ್ಿಸಲು ಚಿಂತಿಸಿದ್ದೇವೆ. ಸರಕಾರದ ವತಿಯಿಂದಲೇ ಮನೆ ನಿಮರ್ಿಸಿಕೊಡಲಾಗುವುದು ಎಂದು ಸಿಎಂ ಈಗಾಗಲೇ ಹೇಳಿದ್ದಾರೆ. ಮಳೆ ನಿಂತ ಕೂಡಲೇ ಮನೆ ನಿಮರ್ಾಣ ಕಾರ್ಯ ಪ್ರಾರಂಭಿಸಲಾಗುತ್ತದೆ. ಒಟ್ಟಾರೆ ಸರಕಾರ ನಿರಾಶ್ರಿತರೊಂದಿಗೆ ಇರಲಿದೆ ಎಂದು ಹೇಳಿದರು.
ಮೈಸೂರಿನಲ್ಲಿ, ಮಂಗಳೂರು, ಹಾಸನದಲ್ಲಿ ಕೇಂದ್ರಗಳನ್ನು ತೆರೆದಿದ್ದು, ದಾನಿಗಳು ಅಗತ್ಯ ಪದಾರ್ಥಗಳನ್ನು ಇಲ್ಲಿಗೆ ತಲುಪಿಸಿದರೆ, ಕೊಡಗಿನ ಜನೆರ್ಗಿ ಇಲ್ಲಿಂದ ಪೂರೈಕೆಯಾಗಲಿದೆ ಎಂದರು. ಈ ವೇಳೆ ಮೇಯರ್ ಸಂಪತ್ರಾಜ್, ಆಯುಕ್ತ ಮಂಜುನಾಥ್ ಪ್ರಸಾದ್, ಡಿಜಿ ನೀಲಮಣಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 