ಬಡವರಿಗೆ ಆಹಾರ ವಿತರಿಸಲು 4 ಎನ್ಜಿಒಗಳಿಗೆ ಬಿಬಿಎಂಪಿ ಅನುಮತಿ
ಬೆಂಗಳೂರು, ಏಪ್ರಿಲ್ 4, ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಶನಿವಾರದಿಂದ ನಿರ್ಗತಿಕರು ಮತ್ತು ಬಡವರಿಗೆ ಉಚಿತ ಆಹಾರ ಪೊಟ್ಟಣಗಳನ್ನು ವಿತರಿಸಲು ನಾಲ್ಕು ಎನ್ಜಿಒಗಳಿಗೆ ಅನುಮತಿ ನೀಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ ಎಚ್ ಅನಿಲ್ ಕುಮಾರ್ ತಿಳಿಸಿದ್ದಾರೆ. ಕಟ್ಟಡ ನಿರ್ಮಾಣ ಕಾರ್ಮಿಕರ ನಿಧಿಯಡಿ, ತಲಾ 2,000 ರೂಗಳನ್ನು ಈಗಾಗಲೇ ಬೆಂಗಳೂರಿನಲ್ಲಿ 15 ಲಕ್ಷ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗಿದೆ. ಎನ್ಜಿಒಗಳು ಈ ಕಾರ್ಮಿಕರಿಗೆ ಆಯ್ಕೆ ಮಾಡಿದ ಸ್ಥಳಗಳಲ್ಲಿ ಆಹಾರ ಪೊಟ್ಟಣಗಳನ್ನು ನೀಡಲು ಅನುಮತಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರ ಉಚಿತ ಬೇಯಿಸಿದ ಆಹಾರ ವಿತರಣೆ ನಿಲ್ಲಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮತ್ತು ವಲಸೆ ಕಾರ್ಮಿಕರಿಗೆ ಆಹಾರ ಧಾನ್ಯ ವಿತರಿಸಲಿದೆ. ಇಂದಿರಾ ಕ್ಯಾಂಟೀನ್ಗಳಲ್ಲಿ ಭಾನುವಾರದಿಂದ ಬೆಳಗಿನ ಉಪಹಾರ( 5 ರೂ.), ಮಧ್ಯಾಹ್ನ ಮತ್ತು ರಾತ್ರಿ ಊಟ ( ಪ್ಲೇಟ್ಗೆ 10 ರೂ.) ಒದಗಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 