ಸರ್ಕಾರ ಹಣಕೊಡದಿದ್ದರೆ ಬಿಬಿಎಂಪಿಯೇ ಇಂದಿರಾ ಕ್ಯಾಂಟೀನ್ ನಡೆಸಲಿದೆ: ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್
ಬೆಂಗಳೂರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್ ಮುಚ್ಚುವ ಪರಿಸ್ಥಿತಿ ಎದುರಾದರೆ ಬಡ ಜನರಿಗೆ ರಿಯಾಯಿತಿ ದರದಲ್ಲಿ ಊಟ, ಉಪಹಾರ ನೀಡುವ ಇಂದಿರಾ ಕ್ಯಾಂಟಿನ್ ಗಳನ್ನು ಬಿಬಿಎಂಪಿ ನಡೆಸಲಿದೆ ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಸ್ಪಷ್ಟವಾಗಿ ಹೇಳಿದ್ದಾರೆ.
ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಹೋಮಿಯೋ ಕೇರ್ ಸಂಸ್ಥೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟಿನ್ ನಡೆಸಲು ಸರ್ಕಾರ ಹಣ ನೀಡಲು ಸಾಧ್ಯವೇ ಇಲ್ಲ ಎಂದರೆ ಪಾಲಿಕೆಯೇ ಇಂದಿರಾ ಕ್ಯಾಂಟೀನ್ ನಡೆಸುತ್ತದೆ. ಈ ಬಗ್ಗೆ ಅನುಮಾನ ಬೇಡ ಎಂದರು.
ಇಂದಿರಾ ಕ್ಯಾಂಟೀನ್ ನಡೆಸಲು ಸರ್ಕಾರ ಅನುದಾನ ಕೊಡಬೇಕಿತ್ತು. ನೆರವು ಪಡೆಲು ಪೂರಕ ಬಜೆಟ್ ನಲ್ಲಿ ಬಜೆಟ್ ನಲ್ಲಿ ಹಣ ನಿಗದಿ ಮಾಡಲಾಗಿತ್ತು. ಆದರೆ ಹಾಲಿ ಬಿಜೆಪಿ ಸರ್ಕಾರ ಸರ್ಕಾರ ಬಂದ ಬಳಿಕ ಕ್ಯಾಂಟಿನ್ ಗೆ ಹಣ ನೀಡುವುದನ್ನು ಕೈಬಿಟ್ಟಿದೆ. ಯಾಕೆ ಹಣ ಕೊಡುತ್ತಿಲ್ಲ ಎಂಬ ಬಗ್ಗೆ ತಮ್ಮ ಬಳಿ ಮಾಹಿತಿ ಇಲ್ಲ ಎಂದರು.
ಆದರೆ ಯಶಸ್ವಿಯಾಗಿ ನಡೆಯುತ್ತಿರುವ ಇಂದಿರಾ ಕ್ಯಾಂಟಿನ್ ಮುಚ್ಚುವುದು ಸಾಧ್ಯವೇ ಇಲ್ಲ. ಸರ್ಕಾರ ಹಣ ಕೊಡದಿದ್ದರೆ ಬಿಬಿಎಂಪಿ ಇಂದಿರಾ ಕ್ಯಾಂಟಿನ್ ನಡೆಸುತ್ತದೆ ಎಂದು ಮೇಯರ್ ಹೇಳಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 