ಸರ್ಕಾರ ಹಣಕೊಡದಿದ್ದರೆ ಬಿಬಿಎಂಪಿಯೇ ಇಂದಿರಾ ಕ್ಯಾಂಟೀನ್ ನಡೆಸಲಿದೆ: ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್
ಬೆಂಗಳೂರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್ ಮುಚ್ಚುವ ಪರಿಸ್ಥಿತಿ ಎದುರಾದರೆ ಬಡ ಜನರಿಗೆ ರಿಯಾಯಿತಿ ದರದಲ್ಲಿ ಊಟ, ಉಪಹಾರ ನೀಡುವ ಇಂದಿರಾ ಕ್ಯಾಂಟಿನ್ ಗಳನ್ನು ಬಿಬಿಎಂಪಿ ನಡೆಸಲಿದೆ ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಸ್ಪಷ್ಟವಾಗಿ ಹೇಳಿದ್ದಾರೆ.
ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಹೋಮಿಯೋ ಕೇರ್ ಸಂಸ್ಥೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟಿನ್ ನಡೆಸಲು ಸರ್ಕಾರ ಹಣ ನೀಡಲು ಸಾಧ್ಯವೇ ಇಲ್ಲ ಎಂದರೆ ಪಾಲಿಕೆಯೇ ಇಂದಿರಾ ಕ್ಯಾಂಟೀನ್ ನಡೆಸುತ್ತದೆ. ಈ ಬಗ್ಗೆ ಅನುಮಾನ ಬೇಡ ಎಂದರು.
ಇಂದಿರಾ ಕ್ಯಾಂಟೀನ್ ನಡೆಸಲು ಸರ್ಕಾರ ಅನುದಾನ ಕೊಡಬೇಕಿತ್ತು. ನೆರವು ಪಡೆಲು ಪೂರಕ ಬಜೆಟ್ ನಲ್ಲಿ ಬಜೆಟ್ ನಲ್ಲಿ ಹಣ ನಿಗದಿ ಮಾಡಲಾಗಿತ್ತು. ಆದರೆ ಹಾಲಿ ಬಿಜೆಪಿ ಸರ್ಕಾರ ಸರ್ಕಾರ ಬಂದ ಬಳಿಕ ಕ್ಯಾಂಟಿನ್ ಗೆ ಹಣ ನೀಡುವುದನ್ನು ಕೈಬಿಟ್ಟಿದೆ. ಯಾಕೆ ಹಣ ಕೊಡುತ್ತಿಲ್ಲ ಎಂಬ ಬಗ್ಗೆ ತಮ್ಮ ಬಳಿ ಮಾಹಿತಿ ಇಲ್ಲ ಎಂದರು.
ಆದರೆ ಯಶಸ್ವಿಯಾಗಿ ನಡೆಯುತ್ತಿರುವ ಇಂದಿರಾ ಕ್ಯಾಂಟಿನ್ ಮುಚ್ಚುವುದು ಸಾಧ್ಯವೇ ಇಲ್ಲ. ಸರ್ಕಾರ ಹಣ ಕೊಡದಿದ್ದರೆ ಬಿಬಿಎಂಪಿ ಇಂದಿರಾ ಕ್ಯಾಂಟಿನ್ ನಡೆಸುತ್ತದೆ ಎಂದು ಮೇಯರ್ ಹೇಳಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 